ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.