ಬೆಳಗಾವಿ : ಕಿತ್ತೂರನ್ನು ಆಳಿದ ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈಗಾಗಲೇ ಕೆಲ ಸಂಸ್ಥೆಗಳಿಗೆ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಇದೀಗ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ನಾಮಕರಣ ಮಾಡುವ ಸಿದ್ಧತೆ ನಡೆದಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ವಾಕರಸಾ ಸಂಸ್ಥೆ) ಹೆಸರು ಇನ್ನು ಮುಂದೆ, ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ (ಆರ್ಸಿಆರ್ಟಿಸಿ) ಎಂದು ಮರು ನಾಮಕರಣವಾಗಲಿದೆ. ಈ ಕುರಿತು ನಿಗಮದ ಅಧ್ಯಕ್ಷ, ಶಾಸಕ ರಾಜು ಕಾಗೆ ಅಧ್ಯಕ್ಷತೆಯಲ್ಲಿ ಫೆ.17ರಂದು ನಡೆದ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಠರಾವು ಪಾಸ್ ಮಾಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಸರಕಾರ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಿದ್ದು, ಶೀಘ್ರ ಅದು ಆಗಲಿದೆ ಎಂದು ಸಂಸ್ಥೆ ಅಧ್ಯಕ್ಷ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೆಸರು ಬದಲಿಗೆ 3 ಹೆಸರು ಆಡಳಿತ ಮಂಡಳಿ ಸಭೆಯಲ್ಲಿಪ್ರಮುಖವಾಗಿ ಚರ್ಚೆಗೆ ಬಂದಿದ್ದವು. ಕಿತ್ತೂರ ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ,ಇನ್ನೊಂದು ಕಿತ್ತೂರ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತೊಂದು ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಸರುಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ಕಿತ್ತೂರ ಕರ್ನಾಟಕ ಮತ್ತು ಕಿತ್ತೂರ ರಾಣಿ ಚನ್ನಮ್ಮ ನಾಮಕರಣ ಮಾಡಿದರೆ ಶಾರ್ಟ್ಕಟ್ ಇಂಗ್ಲಿಷ್ನಲ್ಲಿಕೆಕೆಆರ್ಟಿಸಿ ಎಂದಾಗುತ್ತದೆ.
ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶಾರ್ಟ್ಕಟ್ ಹೆಸರು ಕೆಕೆಆರ್ಟಿಸಿ ಎನ್ನಲಾಗುತ್ತಿದೆ. ಇದರಿಂದ ಸರಕಾರದ ಮಟ್ಟದಲ್ಲಿ ಚರ್ಚೆ ಮತ್ತು ಅನುದಾನ ಹಂಚಿಕೆ ವೇಳೆ ಗೊಂದಲ ಉಂಟಾಗುವ ಸಾಧ್ಯತೆಗಳಿವೆ. ವಿಸ್ತೃತ ಚರ್ಚಿಸಿದಾಗ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮಾಡುವುದರಿಂದ ಗೊಂದಲಕ್ಕೆ ಆಸ್ಪದ ಸಿಗುವುದಿಲ್ಲ. ಹಾಗಾಗಿ ಇದನ್ನು ಅಂತಿಮಗೊಳಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿಗೆ ನಿರ್ದೇಶನಪ್ರಸ್ತಾವನೆ ಸ್ವೀಕರಿಸಿರುವ ಸರಕಾರವು, ಸಮಗ್ರ ವರದಿ ನೀಡುವಂತೆ ಸಂಸ್ಥೆಗೆ ನಿರ್ದೇಶನ ನೀಡಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರ ಬೇಡಿಕೆಗಳ ವಿಷಯ ಒಳಗೊಂಡ ವರದಿ ನೀಡಿದ್ದೇವೆ. ವೆಚ್ಚದ ಮಾಹಿತಿಗೆ ಸಮಯ ಬೇಕಾಗುತ್ತದೆ. ಅದನ್ನೂ ಸಲ್ಲಿಸುತ್ತೇವೆ ಎಂದು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ತಿಳಿಸಿದ್ದಾರೆ.
ಈಶಾನ್ಯ ಸಾರಿಗೆ ಈಗ ಕೆಕೆಆರ್ಟಿಸಿಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು 2021ರಲ್ಲಿಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಎಂದು ಸರಕಾರ ಬದಲಿಸಿದೆ. ಅದೇ ರೀತಿ ಮುಂಬಯಿ ಕರ್ನಾಟಕ ಪ್ರದೇಶವನ್ನು ಕಿತ್ತೂರ ಕರ್ನಾಟಕ ಎಂದು ಅಧಿಸೂಚನೆ ಹೊರಡಿಸಿದೆ. ಆದರೆ, ಸಂಸ್ಥೆ ಹೆಸರಿನಲ್ಲಿಯಾವುದೇ ಬದಲಾವಣೆಗಳಾಗಲಿಲ್ಲ. ಈ ಹಿನ್ನೆಲೆಯಲ್ಲಿಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ನಾನಾ ಸಂಘಟನೆಗಳಿಂದ ಹೆಸರು ಬದಲಾವಣೆಗೆ ಒತ್ತಡಗಳು ಕೇಳಿ ಬಂದಿದ್ದವು.