ಬೆಳಗಾವಿ : ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘದ ವತಿಯಿಂದ ಜೂನ್ 22 ರಂದು ಬೆಳಗ್ಗೆ 9 ಕ್ಕೆ ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಅಂಕ ಪಡೆದ ಬಡ ಪ್ರತಿಭಾವಂತ ಹಡಪದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ವಿಭಾಗದ ಡಿಸಿಪಿ ರವೀಶ ಚಿಕ್ಕನಾಯಕನಹಳ್ಳಿ, ಅಳ್ನಾವರ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರು, ಶಿವಮೊಗ್ಗ ಲೋಕಾಯುಕ್ತ ಸಿಪಿಐ ಗುರುರಾಜ ಮೈಲಾರ, ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿ.ಎಸ್.ನಾವಿ, ನಗರ ಸೇವಕಿ ವೀಣಾ ಬಿಜಾಪುರ, ಮತ್ತು ಎಸ್ ಎಚ್ ಇ ಎ ರಾಜ್ಯಾಧ್ಯಕ್ಷ ಪ್ರಕಾಶ ಹಡಪದ ಉಪಸ್ಥಿತರಿರುವರು. ಹಡಪದ ಸಮಾಜದ ನೌಕರರು ಮತ್ತು ಸಮಾಜ ಬಾಂಧವರು ತಮ್ಮ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಕೋರಲಾಗಿದೆ.