ಬೆಳಗಾವಿ : ಕಾಗವಾಡ ತಾಲೂಕಿನ ಶೇಡಬಾಳದ ಕಬ್ಬಿನ ಗದ್ದೆಯಲ್ಲಿ ವ್ಯಕ್ತಿಯೊಬ್ಬನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಶೇಡಬಾಳದ ಶಶಿಕಾಂತ ಕೃಷ್ಣ ಹೊನಕಾಂಬಳೆ (55) ಮೃತರು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂದು ಅವರ ಪುತ್ರ ರಾಹುಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶ್ವಾನದಳದೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.