ಬೆಳಗಾವಿ : ಅಥಣಿಯ ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಬಣ ಮೇಲುಗೈ ಸಾಧಿಸಿದೆ.
ಮಾಜಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು, ಕೊನೆಗೂ ಫಲಿತಾಂಶ ಪ್ರಕಟಗೊಂಡಿದ್ದು ಲಕ್ಷ್ಮಣ ಸವದಿ ಬಣ ಭರ್ಜರಿಯಾಗಿ ಮೇಲುಗೈ ಸಾಧಿಸಿದ್ದಾರೆ.
ಲಕ್ಷ್ಮಣ ಸವದಿ ಬೆಂಬಲಿತ ಸಂಪೂರ್ಣ ಪ್ಯಾನೆಲ್ನ 12 ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ ರಮೇಶ ಜಾರಕಿಹೊಳಿ ಬಣಕ್ಕೆ ಮುಖಭಂಗವಾಗಿದೆ.


