ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಾಮ ನಿರ್ದೇಶಿತ ನಿರ್ದೇಶಕರಾಗಿ ವಿಧಾನಸಭೆಯ ಮುಖ್ಯ ಸಚೇತಕ, ಕಾಂಗ್ರೆಸ್ನ ರಾಮದುರ್ಗ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಅಶೋಕ ಎಂ. ಪಟ್ಟಣ ಆಯ್ಕೆಯಾಗಿದ್ದಾರೆ.
ರಾಜ್ಯಪಾಲರ ಆದೇಶದ ಅನುಸಾರ ಅಶೋಕ ಪಟ್ಟಣ ಅವರನ್ನು ನಾಮ ನಿರ್ದೇಶಿತ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಕಳೆದ ತಿಂಗಳು ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಸಂಬಂಧಿಸಿ ಕಣಕ್ಕೆ ಇಳಿಯಲು ಉತ್ಸುಕರಾಗಿದ್ದ ಅವರು ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದುಕೊಂಡಿದ್ದರು. ಇದೀಗ ರಾಜ್ಯ ಸರಕಾರ ಅವರನ್ನು ನಾಮನಿರ್ದೇಶಿತ ನಿರ್ದೇಶಕರನ್ನಾಗಿ ಮಾಡುವ ನೇಮಕ ಮಾಡುವ ಮೂಲಕ ಅವರಿಗೆ ಡಿಸಿಸಿ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುವ ಅವಕಾಶ ಮಾಡಿಕೊಟ್ಟಿದೆ.


