ಬೆಳಗಾವಿ:
ಆಡಳಿತ ಪಕ್ಷದವರು 7 ಗಂಟೆ 13 ನಿಮಿಷಗಳ ಕಾಲ 15 ಜನ ಬಿಜೆಪಿಯವರು ಮಾತನಾಡಿದ್ದಾರೆ. 6 ಗಂಟೆ 69 ನಿಮಿಷಗಳ ಕಾಲ ಮಾತನಾಡಿದ್ದಾರೆ.
ಜೆಡಿಎಸ್ 1ಗಂಟೆ 59 ನಿಮಿಷ, ಯತ್ನಾಳ್ 1ಗಂಟೆ 4 ನಿಮಿಷ ಮಾತನಾಡಿದ್ದಾರೆ. 17 ಗಂಟೆ 2 ನಿಮಿಷ ಮಾತನಾಡಿದ್ದಾರೆ ಎಂದು ತಿಳಿಸಿದರು.
ಕೆಲವರು ಉತ್ತಮ ಸಲಹೆಗಳನ್ನು ಕೊಟ್ಟಿದ್ದಾರೆ. ಕೆಲವರು ಟೀಕೆಗಳನ್ನು ಮಾಡಿದ್ದಾರೆ.ಅಧಿವೇಶನ ಪ್ರಾರಂಭವಾದ ಎರಡನೇ ದಿನವೇ ಉತ್ತರ ಕನ್ನಡದ ಬಗ್ಗೆ ಮಾತಮಾಡಿರುವುದು ಈ ಬಾರಿಯ ವಿಶೇಷ ಎಂದರು.
ರಾಜಕೀಯ ನಿಶ್ಯಕ್ತಿ ನಾನಲ್ಲಿ ಹಿಂದೆ ಇರಲಿಲ್ಲ, ಇಂದೂ ಇಲ್ಲ ಮುಂದೆಯೂ ಇರುವುದಿಲ್ಲ. ಹಾಗೇನಾದರೂ ವಿರೋಧಪಕ್ಷಗಳು ಭಾವಿಸಿದ್ದರೆ ಅದು ತಪ್ಪು ಮಾಹಿತಿ ಎಂದು ಮುಖ್ಯಮಂತ್ರಿಗಳು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸಿದರು.
39 ಜನ ಸದಸ್ಯರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಉತ್ತರ ಕರ್ನಾಟಕ ಹಿಂದುಳಿದಿದೆ ಎಂಬ ಕಾರಣಕ್ಕಾಗಿಯೇ 2001 ರಲ್ಲಿ ನಂಜುಂಡಪ್ಪ ಅವರ ಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಯಿತು. ಅವರು ಅಧ್ಯಯನ ಮಾಡಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಅಧ್ಯಯನ ಮಾಡಿ 2002 ರಲ್ಲಿ ವರದಿ ಕೊಡುತ್ತಾರೆ. 39 ತಾಲ್ಲೂಕುಗಳು ಅತ್ಯಂತ ಹಿಂದುಳಿದವು.40 ತಾಲ್ಲೂಕುಗಳು ಅತಿ ಹಿಂದುಳಿದವು. 35 ತಾಲ್ಲೂಕುಗಳು ಹಿಂದುಳಿದಿವೆ. ಒಟ್ಟು 114 ತಾಲ್ಲೂಕುಗಳು ಹಿಂದುಳಿದಿವೆ ಎಂದು ಗುರುತಿಸಿದ್ದಾರೆ. 8 ವರ್ಷಗಳಲ್ಲಿ 31000 ಕೋಟಿ ರೂಗಳನ್ನು ಸರ್ಕಾರ ವೆಚ್ಚ ಮಾಡಬೇಕು. ಈ ಪೈಕಿ 15,000 ಕೋಟಿ ಸಾಮಾನ್ಯವಾಗಿ ಬರುತ್ತದೆ. ಜೊತೆಗೆ 16000 ಕೋಟಿಗಳನ್ನು 8ವರ್ಷಗಳಲ್ಲಿ ವೆಚ್ಚ ಮಾಡಬೇಕು ಎಂದು ಶಿಫಾರಸ್ಸು ಮಾಡಿದ್ದರು. ಪ್ರಸ್ತುತ 31000 ಕೋಟಿಗಳಿಗಿಂತ ಹೆಚ್ಚು ವೆಚ್ಚ ಮಾಡಲಾಗಿದೆ. ನಮ್ಮ ಸಾಕಾರ ಅಧಿಕಾರಕ್ಕೆ ಬಂದ ನಂತರ 3000 ಕೋಟಿ ವಿಶೇಷ ಅಭಿವೃದ್ಧಿ ಯೋಜನೆಯಡಿ ವೆಚ್ಚ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಅಸಮತೋಲನ ಎಷ್ಟರ ಮಟ್ಟಿಗೆ ನಿವಾರಣೆಯಾಗಿದೆ. ವರದಿಯ ಪರಿಣಾಮಗಳೇನು , ಇನ್ನೂ ಉತ್ತರ ಕರ್ನಾಟಕ ಹಿಂದುಳಿದಿವೆ. 39 ರಲ್ಲಿ 27 ತಾಲ್ಲೂಕುಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುತ್ತವೆ. 31000 ಕೋಟಿ ವೆಚ್ಚ ಮಾಡಿದರೂ ಪ್ರಾದೇಶಿಕ ಅಸಮತೋಲನ ಇನ್ನೂ ನಿವಾರಣೆಯಾಗಿಲ್ಲ ಎಂದು ಪ್ರಸ್ತಾಪಿಸಲಾಗಿದೆ.
ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ:
ವಿರೋಧ ಪಕ್ಷದ ನಾಯಕರು ತಲಾ ಆದಾಯದ ಬಗ್ಗೆ ಮಾತನಾಡಿದ್ದು, ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡಿದ ದಿನದಿಂದ ಇಂದಿನವರೆಗೆ ಮಾತನಾಡುತ್ತಿದ್ದಾರೆ.ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ.
ಏಳು ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು: ಸಿಎಂ ಭರವಸೆ:
ನಂಜುಂಡಪ್ಪ ವರದಿ ಜಾರಿಯಾದ ನಂತರದಲ್ಲಿ ಡೈರಿ ಚಟುವಟಿಕೆಗಳು ಹೆಚ್ಚಾಗಿದ್ದು, ಕೆಎಂಎಫ್ ನಲ್ಲಿ ಪ್ರತಿ ದಿನ 1 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಹಾಲು ಒಕ್ಕೂಟದಲ್ಲಿ ಪ್ರತಿದಿನಕ್ಕೆ 67 ಸಾವಿರ ಲೀಟರ್ ಉತ್ಪಾದನೆ ಆಗುತ್ತಿದೆ. ಈ ಎರಡರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಹಳೆ ಮೈಸೂರಿನಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ ಉತ್ತರ ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ಒಮ್ಮೆ ಮೂರು ರೂ ಮತ್ತೊಮ್ಮೆ 400 ಗಳ ಸಹಾಯಧನವನ್ನು ಹೆಚ್ಚಳ ಮಾಡಿದೆ. ಈ ಮೊತ್ತ ಸಂಪೂರ್ಣವಾಗಿ ರೈತರಿಗೆ ಹೋಗುತ್ತಿದೆ. ಬಿಜೆಪಿ ಸರ್ಕಾರ ಬಿಟ್ಟು ಹೋಗಿದ್ದ 600 ಕೋಟಿ ಗಳನ್ನು ನಮ್ಮ ಸರ್ಕಾರ ತೀರಿಸಿದೆ. ಮೇವಿನ ವೆಚ್ಚ ಹೆಚ್ಚಳವಾಗಿದೆ ಎಂಬ ಕಾರಣಕ್ಕೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 7 ರೂಗಳ ಪ್ರೋತ್ಸಾಹ ಧನವನ್ನು ಈ ಅವಧಿಯಲ್ಲಿಯೇ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ನಮ್ಮ ಸರ್ಕಾರ 2013ರಿಂದ 2018 ರವರೆಗೆ 118 ಭರವಸೆಗಳ ಪೈಕಿ 115 ಭರವಸೆಗಳನ್ನು ಈಡೇರಿಸಲಾಗಿದೆ. ಜೊತೆಗೆ ಸಂಪೂರ್ಣವಾಗಿ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ.
ಈ ಬಾರಿ 593 ಭರವಸೆಗಳನ್ನು ಈಡೇರಿಸಲಾಗುವುದು. 600 ರಲ್ಲಿ 60 ಭರವಸೆಗಳನ್ನು ಈಡೇರಿಸಿದ್ದಾರೆ. ಇವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ.
ಪ್ರೊ.ಆರ್.ಗೋವಿಂದರಾವ್ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು:
ಬೆಳಗಾವಿ ಅಧಿವೇಶನದಲ್ಲಿ ಪ್ರೊ.ಆರ್.ಗೋವಿಂದರಾವ್ ಅವರು ನವೆಂಬರ್ ಕೊನೆಯವರೆಗೂ ಅಧಿಕಾರವಿತ್ತು. ಅವರು ಇನ್ನೂ ಎರಡು ತಿಂಗಳು ಅಗತ್ಯವಿದೆ ಎಂದು ತಿಳಿಸಿದ ಮೇರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಬಹುತೇಕ ಜನವರಿಯಲ್ಲಿ ವರದಿಯನ್ನು ಕೊಡುತ್ತಾರೆ. ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಗೆ ವರದಿಯನ್ನು ಜಾರಿ ಮಾಡುತ್ತೇವೆ. ಕಿತ್ತೂರು ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ 500 ಕೋಟಿ ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರೊ.ಗೋವಿಂದರಾವ್ ವರದಿ ಬಂದ ನಂತರ ಮಾಡಲಾಗುವುದು ಎಂದು ತಿಳಿಸಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿಯೇ ಪ್ರೊ.ಗೋವಿಂದರಾವ್ ಸಮಿತಿ ರಚಿಸಲಾಗಿದೆ. ರಾಷ್ಟ್ರೀಯ 14 ನೇ ಹಣಕಾಸು ಸಮಿತಿಯ ಸದಸ್ಯರಾಗಿದ್ದರು. ಬಹುತೇಕ ಜನವರಿ 2026ನಲ್ಲಿ ವರದಿ ಬರಲಿದೆ ಎಂದರು. ಗೋವಿಂದರಾವ್ ಅವರು ಉತ್ತರ ಕರ್ನಾಟಕದ ಆರ್ಥಿಕ ತಜ್ಞರು. ವರದಿ ಪರಿಶೀಲಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು ಎಂದರು.
ಹೈದರಾಬಾದ್ ಕರ್ನಾಟಕವನ್ನು 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. . ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 80% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.
371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ಅದನ್ನು ತಿರಸ್ಕರಿಸಿದ್ದು ಬಿಜೆಪಿಯ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು.ಹಾಗಾಗಿ ವಿರೋಧಪಕ್ಷದವರಿಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದರು.
2023ರಲ್ಲಿ 3000 ಕೋಟಿ 2025/2026 ರಲ್ಲಿ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
ಉತ್ತರ ಕರ್ನಾಟಕದ ಅಭಿವೃದ್ಧಿಗೆ 300 ಕೆಪಿಎಸ್ ಶಾಲೆಗಳು:
1800 ಕೋಟಿ ಈ ವರ್ಷ ವೆಚ್ಚವಾಗಿದೆ ಈ ವರ್ಷ 5000 ಕೋಟಿ ವೆಚ್ಚವಾಗಲೇಬೇಕು ಎಂದು ಸೂಚಿಸಲಾಗಿದೆ. ಇಷ್ಟೆಲ್ಲಾ ವೆಚ್ಚ ಮಾಡಿದರೂ ಶಿಕ್ಷಣ, ಪೌಷ್ಟಿಕತೆ, ಆರೋಗ್ಯದ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡಬೇಕು ಎಂದು ಸೂಚಿಸಿ ಪ್ರೊ.ಛಾಯಾ ದೇವಡಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಇವರು ವರದಿಯನ್ನು ಸಲ್ಲಿಸಿದ್ದು, ಸರ್ಕಾರ ಪರಿಶೀಲಿಸಿ ಜಾರಿಗೆ ತರಲಾಗುವುದು
ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಕ್ಷರತೆ ಸುಧಾರಣೆಯಾಗಲಿದೆ ಎಂದರು. ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿದ್ದು, ಹೆಚ್ಚು ಆಸ್ಪತ್ರೆಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. 371 ಜೆ ಜಾರಿಯಾದ ಮೇಲೆ 10000 ವೈದ್ಯಕೀಯ 8000 ಇಂಜಿನಿಯರಿಂಗ್ 12000 ಡೆಂಟಲ್ ಮತ್ತಿತರ ಕೋರ್ಸುಗಳಿಗೆ ಸೇರಿದ್ದಾರೆ. 80% ಭರ್ತಿ ಪ್ರಕ್ರಿಯೆ ಸ್ಥಳೀಯವಾಗಿಯೇ ಆಗಬೇಕೆಂದು ಸೂಚಿಸಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಏನೆಲ್ಲಾ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತಿದ್ದೇವೆ. ರಾಜ್ಯದಲ್ಲಿ 900 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಈ ಭಾಗದ ಅಭಿವೃದ್ಧಿಗೆ 300 ಕೆಪಿಎಸ್ ಶಾಲೆಗಳನ್ನು ತೆರೆಯಲು ಸೂಚಿಸಿದೆ ಎಂದರು.
ಎಲ್ಲಾ ಜಿಲ್ಲೆಗಳೂ ಸಮಾನವಾಗಿ ಅಭಿವೃದ್ಧಿಯಾದಾಗ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ಜಾತಿ ವ್ಯವಸ್ಥೆ ಇರುವುದರಿಂದ ಎಲ್ಲರಿಗೂ ಸಮಾನ ಅವಕಾಶಗಳು ಸಿಕ್ಕಿಲ್ಲ. 1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ಮಾಡಿದ ಭಾಷಣದಲ್ಲಿ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಗದೇ ಹೋದರೆ ರಾಜಕೀಯ ಸ್ವಾತಂತ್ರ್ಯದಿಂದ ಸಮಾನತೆ ಸಾಧ್ಯವಿಲ್ಲ ಎಂದಿದ್ದರು. ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದು, ಅಸಮಾನತೆ ತೊಲಗಿಸದೆ ಹೋದರೆ ಆ ಜನರೇ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡ್ತಾರೆ ಎಂದಿದ್ದರು. ಆ ಕಾರಣಕ್ಕಾಗಿಯೇ ಅನೇಕ ಭಾಗ್ಯಗಳನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಎಲ್ಲ ಧರ್ಮದ , ಪಕ್ಷದ ಬಡವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದಾರೆ. ಕರ್ನಾಟಕ ಇದರಿಂದಾಗಿಯೇ ದೇಶದಲ್ಲಿ ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಚಲನೆಯಿಲ್ಲದ ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ, ಸಾಮಾಜಿಕ ಸಬಲೀಕರಣ ಅಗತ್ಯ. ಆಗ ಮಾತ್ರ ಜಡತ್ವ ಹೋಗಲಾಡಿಸಬಹುದು. ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ 10 ರಿಂದ12% ಇತ್ತು.76% ಸಾಕ್ಷರತೆ ಈಗಿದ್ದರೂ ಜಾತಿ ವ್ಯವಸ್ಥೆ ಹೋಗಿಲ್ಲ. ವೈದ್ಯರೂ ಕೂಡ ಹಣೆಬರಹ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಡುತ್ತಾರೆ.ನಮ್ಮಲ್ಲಿ ಜಾತಿ ವ್ಯವಸ್ಥೆಯ ಕಾರಣದಿಂದ ಗುಲಾಮಗಿರಿಯ ಮನಸ್ಥಿತಿ ಮನೆ ಮಾಡಿಕೊಂಡಿದೆ. ಇದಕ್ಕಾಗಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಎಂ ಮಾತು…
ನಮ್ಮ ಸರ್ಕಾರದ ಪ್ರಮುಖ ಸ್ಕೀಮುಗಳಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿವೆ. ಮೊದಲಿಗೆ ಈ ಭಾಗದ ಜನರಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಎಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರ ಖಾತೆಗಳಿಗೆ ವರ್ಗಾವಣೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸದನದ ಮೂಲಕ ಜನರ ಗಮನಕ್ಕೆ ತರಬೇಕಾಗಿರುವುದು ನಮ್ಮ ಜವಾಬ್ಧಾರಿ.
ನಾವು ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭ ಮಾಡಿದ ದಿನಾಂಕದಿAದ ಅಕ್ಟೋಬರ್- ನವೆಂಬರ್ ವರೆಗೆ ನಮ್ಮ ಸರ್ಕಾರ 106076 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ. ಇದರಲ್ಲಿ 46277 ಕೋಟಿ ರೂಪಾಯಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗಾಗಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಒಟ್ಟು ವೆಚ್ಚದಲ್ಲಿ ಶೇ. 43.63 ರಷ್ಟು ಅನುದಾನಗಳು ಈ ಭಾಗದ ಜನರಿಗಾಗಿ ವೆಚ್ಚ ಮಾಡಲಾಗಿದೆ.
ಈ ಸದನದಲ್ಲಿ ಅನೇಕರಿಗೆ ಗ್ಯಾರಂಟಿ ಯೋಜನೆಗಳ ಕುರಿತು ನಕಾರಾತ್ಮಕ ಭಾವನೆಗಳಿವೆ. ಆದರೆ ಇಡೀ ದೇಶದ ಆರ್ಥಿಕತೆ ಕುಸಿಯುತ್ತಿರುವಾಗ ಕರ್ನಾಟಕ ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆ ಬಹಳ ದೊಡ್ಡದಿದೆ.
ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳ ಶಾಲೆ, ಕಾಲೇಜು, ಆಸ್ಪತ್ರೆ ಮುಂತಾದವುಗಳ ಕುರಿತಂತೆ ಹಲವು ಅಂಕಿ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಅವರು ಹೇಳಿರುವ ಅಂಕಿ ಅಂಶಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ.


