ಬೆಳಗಾವಿ: ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಚ್ಚೆ ಗ್ರಾಮದಲ್ಲಿ ರವಿವಾರ ಆಯೋಜಿತಗೊಂಡಿದ್ದ ಅಖಂಡ ಹಿಂದೂ ಸಮ್ಮೇಳನದ ಶೋಭಾಯಾತ್ರೆ ಸಂದರ್ಭದಲ್ಲಿ ಮಹಾರಾಷ್ಟ್ರದ ಪ್ರಖ್ಯಾತ ಹಿಂದೂ ನಾಯಕಿ ಹರ್ಷಿತಾ ಠಾಕೂರ್ ಅವರು ಪೀರನವಾಡಿಯ ಅನ್ಸಾರಿ ದರ್ಗಾದ ಬಳಿ ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಸನ್ನೆ ಮಾಡಿ ತೋರಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಪ್ರಚೋದನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಈಗ ಅವರ ಮೇಲೆ ದೂರು ದಾಖಲಾಗಿದೆ.
ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹರ್ಷಿತಾ ಠಾಕೂರ್ ಸೇರಿ ಏಳು ಜನರ ವಿರುದ್ಧ ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಪೀರನವಾಡಿಯ ಅಬ್ದುಲ್ ಖಾದರ್ ಮುಜಾವರ ದೂರು ದಾಖಲಿಸಿದ್ದಾರೆ.
ಮಚ್ಚೆ ಗ್ರಾಮದಲ್ಲಿ ರವಿವಾರ ಹಿಂದೂ ಸಮ್ಮೇಳನ ಆಯೋಜಿತಗೊಂಡಿತ್ತು. ಸಮ್ಮೇಳನಕ್ಕೂ ಮೊದಲು ಭವ್ಯ ಶೋಭಾಯಾತ್ರೆ ನಡೆಯಿತು. ತೆರೆದ ವಾಹನದಲ್ಲಿ ನಿಂತಿದ್ದ ಹರ್ಷಿತಾ ಅವರು ಅನ್ಸಾರಿ ದರ್ಗಾ ಬಳಿ ಬಂದಾಗ ವಾಹನ ನಿಲ್ಲಿಸಿದ್ದಾರೆ. ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಸನ್ನೆ ಮಾಡಿದ್ದಾರೆ. ಆಗ ನೆರೆದವರು ಜೈ ಶ್ರೀರಾಮ ಎಂದು ಘೋಷಣೆ ಕೂಗಿದ್ದಾರೆ. ಸಮಾವೇಶದಲ್ಲಿಯೂ ಧಾರ್ಮಿಕ ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು
ಸಮ್ಮೇಳನದ ಆಯೋಜಕರಾದ ಬೆಳಗಾವಿಯ ಸುಪ್ರೀತ್ ಸಿಂಪಿ, ಶ್ರೀಕಾಂತ ಕಾಂಬಳೆ, ಬೆಟ್ಟಪ್ಪ ತಾರಿಹಾಳ, ಶಿವಾಜಿ ಶಹಾಪುರಕರ, ಗಂಗಾರಾಮ ತಾರಿಹಾಳ, ಕಲ್ಲಪ್ಪ ಅವರ ಮೇಲೆ ದೂರು ದಾಖಲಾಗಿದೆ.


