ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ಜಿಎ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ ಹಾಗೂ ಎನ್. ಎಸ್.ಎಸ್. ಚಟುವಟಿಕೆಗಳ ಮುಕ್ತಾಯ ಸಮಾರಂಭ ಜರುಗಿತು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಬೆಳಗಾವಿಯ – ಉಪಕಾರ್ಯದರ್ಶಿ(ಆಡಳಿತ) ಬಸವಾರಾಜ ಹೆಗ್ಗನಾಯಕ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವ ರೀತಿ ಈಗಿನಿಂದಲೇ ತಯಾರಿ ಮಾಡಬೇಕೆಂದು ತಿಳಿಸಿಕೊಟ್ಟರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಿ. ಎಸ್. ಪವಾರ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಉನ್ನತ ಸ್ಥಾನದಲ್ಲಿ ಪಾಸಾಗಿ ಕಾಲೇಜಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.
ಉಪಪ್ರಾಚಾರ್ಯ ಸಿ.ಪಿ. ದೇವರುಷಿ, ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಹಿತೇಶ ಸಹಾನಿ, ಉಪ ಪ್ರಧಾನ ಕಾರ್ಯದರ್ಶಿ ಕವಿತಾ ಖನಗಾವಿ ಉಪಸ್ಥಿತರಿದ್ದರು.
ಅಂಜಲಿ ಲಮಾಣಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮೇಘಾ ಹಾಗೂ ಸಂಗಡಿಗರು ಸ್ವಾಗತಗೀತೆ ಹಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಟಿ.ಪಿ ಬಾನಕರೆ ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಸೋಮು ಎನ್ ಮಡಿವಾಳರ ಪರಿಚಯಿಸಿದರು. ಒಕ್ಕೂಟ ವರದಿಯನ್ನು ದಿವ್ಯಾ ಪಾಲಭಾವಿ ಮಂಡಿಸಿದರು. ಎಚ್ .ಎಸ್. ಮಹಿಮಗೋಳ ವಂದಿಸಿದರು. ಎಸ್. ಎಸ್. ಗಂಗಾಪುರ ಹಾಗೂ ಎಸ್.ಎಫ್. ದೇವಲಾಪುರ ನಿರೂಪಿಸಿದರು.
ಉಪನ್ಯಾಸಕರು ವಿದ್ಯಾರ್ಥಿ/ನಿಯರು, ಸ್ವಯಂ ಸೇವಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


