ಬೆಳಗಾವಿ: ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತು ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರು ಮಂಗಳವಾರ ಕಟ್ಟುನಿಟ್ಟಿನ ದಾಳಿ ನಡೆಸಿ ಒಟ್ಟು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೂ.68 ಸಾವಿರಕ್ಕೂ ಹೆಚ್ಚು ನಗದು ಹಣ ಜಪ್ತಿ ಮಾಡಲಾಗಿದೆ.
ಸಿಸಿಬಿ ದಾಳಿ: ಟಿ-20 ವಿಶ್ವಕಪ್ ಪಂದ್ಯಗಳ ಮೇಲೆ ಬೆಟ್ಟಿಂಗ್
ಉದ್ಯಮಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯಾದ ಉತ್ಸವ ಡಬಲ್ ರೋಡ್, ಜೈನ್ ಕಾಲೇಜು ರಸ್ತೆಯ ಬಳಿ ಕ್ರಿಕೆಟ್ ಟಿ-20 ವಿಶ್ವಕಪ್ ಪಂದ್ಯಗಳ ಫಲಿತಾಂಶದ ಮೇಲೆ ಸಾರ್ವಜನಿಕರಿಂದ ಹಣ ಪಣಕ್ಕಟ್ಟಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇರೆಗೆ ಸಿಸಿಬಿ ತಂಡ ದಾಳಿ ನಡೆಸಿತು.
ಖಚಿತ ಮಾಹಿತಿ ಆಧರಿಸಿ ಪಿಐ ಮಂಜುನಾಥ ನಾಯಕ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಮಂಜುನಾಥ ಜಿ. ಭಜಂತ್ರಿ ನೇತೃತ್ವದ ತಂಡ ದಾಳಿ ನಡೆಸಿ,
ಪಂಕಜ ದಿಲೀಪ ನಾರಾಯಣಕರ (21), ಸಾ: ಉಪಾರ ಗಲ್ಲಿ, ಖಾಸಬಾಗ, ಬೆಳಗಾವಿ ಅವರನ್ನು ವಶಕ್ಕೆ ಪಡೆದಿದೆ.
ಆರೋಪಿತನಿಂದ ರೂ.40,500/- ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಯಳ್ಳೂರಿನಲ್ಲಿ ಅಂದರ್-ಬಾಹರ್ ಜೂಜಾಟ: 9 ಮಂದಿ ಬಲೆಗೆ
ಇನ್ನೊಂದೆಡೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಳ್ಳೂರ-ಅನಗೋಳ ರಸ್ತೆಯ ಹತ್ತಿರ ಖುಲ್ಲಾ ಜಾಗೆಯಲ್ಲಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ
ವಿನಯ ನಾರಾಯಣ ಮೋರೆ (22), ಖಾನಾಪೂರ
ರಾಜ ಸಂಭಾಜಿ ಮಾಪನಕರ (22), ಅನಗೋಳ
ರೋಹಿತ್ @ ಸಾಹಿಲ್ ಶ್ರೀಕಾಂತ ಚೌಧರಿ (23), ಜೇರೆಗಲ್ಲಿ
ಮೊಹಮ್ಮದ್ ಹನೀಪ್ ಬಾಬು ಮುಲ್ಲಾ (61), ಬಸವನ ಕುಡಚಿ
ಫಕಿರಪ್ಪ ಬಸವಣ್ಣ ಕಿಲಾರಿ (60), ತಹಶೀಲ್ದಾರ ಗಲ್ಲಿ
ನಾಗೇಶ ನಾರಾಯಣ ದೆಸೂರಕರ (34), ವಡಗಾಂವ
ಪ್ರಕಾಶ ಮಹಾದೇವ ಸುತಾರ (34), ಕಾಮತ ಗಲ್ಲಿ
ಸಾಗರ ಮನೋಹರ ರಾವುಳ (35), ತಾರಿಹಾಳ
ವಿಜಯ ಸಿದ್ದಪ್ಪ ಮುತ್ತ್ಯಪ್ಪಗೋಳ, ರಾಜಹಂಸಗಲ್ಲಿ, ಅನಗೋಳ
ಇವರಿಂದ ಒಟ್ಟು ರೂ.27,960 /- ನಗದು ಹಣ ಹಾಗೂ ಇಸ್ಪೀಟ್ ಎಲೆಗಳ ಪೆಟ್ಟಿಗೆಗಳನ್ನು ಜಪ್ತಿ ಮಾಡಲಾಗಿದೆ.
ಗ್ರಾಮೀಣ ಠಾಣೆಯ ಪಿಐ ನಾಗನಗೌಡ ಕಟ್ಟಿಮನಿಗೌಡ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪೊಲೀಸ್ ಎಚ್ಚರಿಕೆ
ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟ ಹಾಗೂ ಕ್ರಿಕೆಟ್ ಬೆಟ್ಟಿಂಗ್ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ವಿಶೇಷ ನಿಗಾ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


