ಬೆಳಗಾವಿ: ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಶ್ರೀ ಕುಮಾರೇಶ್ವರ ಉಚಿತ ಪ್ರಸಾದ ನಿಲಯದಲ್ಲಿದ್ದು ಉಚಿತ ಶಿಕ್ಷಣ ಮತ್ತು ಉಚಿತ ಊಟ ಹಾಗೂ ವಸತಿ ಪಡೆಯಲು ಬಯಸುವ ಬಾಲಕ ಮತ್ತು ಬಾಲಕಿಯರಿಗೆ ಪ್ರವೇಶ ಪರೀಕ್ಷೆಯನ್ನು ಇದೇ ರವಿವಾರ ಏ. 5 ರಂದು ಮುಂಜಾನೆ 10:00 ಗಂಟೆಗೆ ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ವಿದ್ಯಾರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿ 2025-26 ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯುವ ಅರ್ಹತೆ ಹೊಂದಿರಬೇಕು.
ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳ ಪಾಲಕರು ವಿವರಗಳಿಗಾಗಿ ಈ ಕೆಳಗೆ ನೀಡಿದ ಮೊಬೈಲ್ ಸಂಖ್ಯೆ 9036391511 ಮತ್ತು 9844947387 ಹಾಗೂ
9632567706 ಗಳಿಗೆ ಸಂಪರ್ಕಿಸಬಹುದು ಸಂಪರ್ಕಿಸಿ ಆನ್ಲೈನ್ ಮೂಲಕ ಎಲ್ಲ ವಿವರಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಸಲ್ಲಿಸಲು ಸಾಧ್ಯವಾಗದವರು ಏ. 5 ರಂದು ಬೆಳಗ್ಗೆ 9-00 ಗಂಟೆಗೆ ವಿವರಗಳೊಂದಿಗೆ ಸ್ಥಳದಲ್ಲಿಯೇ ಅರ್ಜಿಗಳನ್ನು ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಶ್ರೀ ಸಿದ್ದರಾಮೇಶ್ವರ ಎಜುಕೇಶನ್ ಟ್ರಸ್ಟ್, ಬೆಳಗಾವಿ ನಾಗನೂರು ರುದ್ರಾಕ್ಷಿ ಮಠ, ಶಿವಬಸವ ನಗರ ಬೆಳಗಾವಿ, ಇಲ್ಲಿ ನಡೆಯಲಿದೆ.


