ಬೆಳಗಾವಿ: ಜನ ಜೀವಾಳ ಜಾಲ : ಸೆಪ್ಟೆಂಬರ್ 29 ರಂದು (ಶುಕ್ರವಾರ ) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯ ಯಾವುದೇ ಸರ್ಕಾರಿ ಶಾಲೆಗಳಿಗೆ ಕಾಲೇಜುಗಳಿಗೆ ಕಚೇರಿಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ನಿತೀಶ ಪಾಟೀಲ ತಿಳಿಸಿದ್ದಾರೆ. ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿತ್ತು. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿತ್ತು. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿದ್ದವು.
ಬೆಳಗಾವಿ: ನಾಳೆ ರಜೆ ಇಲ್ಲ! ‘ಜನ ಜೀವಾಳ’ಕ್ಕೆ ಮಾಹಿತಿ ನೀಡಿದ ಡಿಸಿ ನಿತೇಶ…!!
