ಬೆಳಗಾವಿ : ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಪ್ರಭಾರಿ ಪ್ರಾಚಾರ್ಯ ಪ್ರೊ. ಪಿ. ಎ. ಯಜುರ್ವೇದಿ ಅವರು ಕನಕದಾಸರ ಜೀವನ ಮತ್ತು ಸಾಧನೆಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಕಾನೂನು ಸಹಾಯ ಕೋಶ ಹಾಗೂ ಸಾಹಿತ್ಯ ಕ್ಲಬ್ನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ವಿಭಾಗದ ಸಂಯೋಜಕಿ ಪ್ರೊ. ಸಮೀನಾ ನಾಹಿದ್ ಬೇಗ ಅವರು ಆಯೋಜಿಸಿದ್ದರು. ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


