ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳ ಸಂಬಂಧ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ತೋರಿಸಿದ ಆರನೇ ಜಾಗದಲ್ಲಿ ಗುರುವಾರ ಮೃತದೇಹದ ಕುರುಹು ಪತ್ತೆಯಾಗಿದೆ.
ಮೃತದೇಹದ ಕುರುಹು ಸಿಕ್ಕಿದೆ. ಅದು ಗಂಡಸಿನ ಮೃತದೇಹದ ಅವಶೇಷದಂತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ವಿಧಿವಿಜ್ಞಾನ ತಜ್ಞರ ತಂಡವು ಸ್ಥಳದಲ್ಲೇ ಇದ್ದು, ಮೃತದೇಹದ ಅವಶೇಷಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದೆ.