ಬೆಳಗಾವಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಉತ್ಕೃಷ್ಟ ನ್ಯಾಯವಾದಿಗಳಾಗಿ ಹೊರಹೊಮ್ಮಬೇಕು ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಾಂತೇಶ ಶಿಗಲಿ ಕರೆ ನೀಡಿದರು.
ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2024-25ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಕಾನೂನು ಪದವೀಧರರಿಗೆ ಹೆಚ್ಚು ಅವಕಾಶಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವ
ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡಬೇಕು” ಎಂದರು.
ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ಹಾಗೂ ಮಹಾ ವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಆರ್.ಬಿ. ಬೆಲ್ಲದ ಅವರು ಮಾತನಾಡಿ, ”ಕೆಎಲ್ಇ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಉತ್ಕೃಷ್ಟವಾದ ಸೌಲಭ್ಯ ಒದಗಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು”, ಎಂದು ತಿಳಿಸಿದರು.
ಪ್ರಾಚಾರ್ಯೆ ಡಾ. ಜ್ಯೋತಿ ಹಿರೇಮಠ, ಮಹಾವಿದ್ಯಾಲಯದ ಐಕ್ಯೂಎಸಿ ಮುಖ್ಯಸ್ಥೆ ಡಾ. ಉಮಾ ಹಿರೇಮಠ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಿಚಾ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.