ಬೆಂಗಳೂರು : ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮ ವಹಿಸುವಂತೆ ತಿಳಿಸಿದೆ.
https://photos.app.goo.gl/YcleNHnDNPecW8Q48 ಆನ್ಲೈನ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ ಹಾಕಿಕೊಳ್ಳಬೇಕು
