ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಿಸಿ ಮಹಿಳೆ, ವೃದ್ಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಪುತ್ರ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತಾಪರಾವ್ ಪಾಟೀಲ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಅಕ್ಟೋಬರ್ 6 ರಂದು ಇಟ್ನಾಳದಲ್ಲಿ ಗುಂಪು ಕಟ್ಟಿಕೊಂಡು ಮಹಿಳೆ ಹಾಗೂ ವೃದ್ಧರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿರುವ ಹಾಗೂ ಕಲ್ಲು ತೂರಾಟ ನಡೆಸಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಗಾಯಾಳುಗಳನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಫ್ ಐ ಆರ್ ದಾಖಲಾದರೂ ಈವರೆಗೆ ಕೇವಲ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗಾಯಾಳುಗಳು ಅಳಲು ತೋಡಿಕೊಂಡಿದ್ದಾರೆ.