ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಾಕಿ ಬೆಳಗಾವಿ ಇವರು ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ತ ಮೇಜರ್ ಧ್ಯಾನ್ ಚಂದ್ ಟ್ರೋಫಿಯನ್ನು ಬೆಳಗಾವಿಯ ನಗರದ ಲೀಲೆ ಆಟದ ಮೈದಾನದಲ್ಲಿ ಆಯೋಜಿಸಲಾಗಿತ್ತು .
ಬೆಳಗಾವಿಯ ವಿವಿಧ ಕಾಲೇಜುಗಳಿಂದ ಒಟ್ಟೂ ಐದು ತಂಡಗಳು ಪಾಲ್ಗೊಂಡಿದ್ದವು. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ತಂಡವು ವಿದ್ಯಾರ್ಥಿ ಅಭಿಷೇಕ ಕೊಂಕಣಿ ಅವರ ನೇತೃತ್ವದಲ್ಲಿ ಪಾಲ್ಗೊಂಡು ಅಂತಿಮ ಹಣಾಹಣಿಯಲ್ಲಿ ಪ್ರಶಸ್ತಿಯನ್ನು ಗೆದ್ದು ಬೀಗಿತು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅವರು ವಿದ್ಯಾರ್ಥಿಗಳ ಅಮೋಘ ಸಾಧನೆಯನ್ನು ಮನದುಂಬಿ ಪ್ರಶಂಸಿಸಿದರು. ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡಲ್ಲಿಯೂ ವಿಶಿಷ್ಟವಾದ ಸಾಧನೆಯನ್ನು ಮಾಡುವುದರ ಮೂಲಕ ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಕರುಣಾ ಅಮೃಸ್ಕರ್, ತರಬೇತುದಾರ ಡಾ. ಗಿರಿಜಾಶಂಕರ ಮಾನೆ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.