Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಾಸಕ ವಿಠ್ಠಲ ಹಲಗೇಕರ ಅವರಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ಬೆಳಗಾವಿ: ಖಾನಾಪುರ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕ ವಿಠ್ಠಲರಾವ್ ಹಲಗೇಕರ ಅವರು ಬೆಳಗಾವಿಯಲ್ಲಿ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರಮುಖ ಬೇಡಿಕೆಗಳು ಮತ್ತು ಅನುದಾನ:
100 ಕೋಟಿ ರೂ. ಮೊತ್ತದ ನೀರಾವರಿ ಮತ್ತು ಬ್ಯಾರೇಜ್ ಕಾಮಗಾರಿಗಳು:
ಪಾರಿಶ್ವಾಡ-ಅವರೋಳಿ ಗ್ರಾಮಗಳ ಬಳಿ ನೀರು ಸರಬರಾಜು ಯೋಜನೆ – 50 ಕೋಟಿ ರೂ.
 ಜಳಗಾ ಗ್ರಾಮದ ಬಳಿ ನೀರು ಸರಬರಾಜು ಯೋಜನೆ – 15 ಕೋಟಿ ರೂ. ಶೇಡೇಗಾಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ಯಾರೇಜ್ ನಿರ್ಮಾಣ 15 ಕೋಟಿ ರೂ., ನಿಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ –10 ಕೋಟಿ ರೂ., ತೋರಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ಯಾರೇಜ್ ನಿರ್ಮಾಣ 10 ಕೋಟಿ ರೂ.,
 ಭೂಗತ ವಿದ್ಯುತ್ ವಿತರಣಾ ವ್ಯವಸ್ಥೆ (UG Cable):
 ಖಾನಾಪುರ ತಾಲೂಕು ಅರಣ್ಯ ಪ್ರದೇಶ ಹಾಗೂ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವುದರಿಂದ ಪ್ರತಿ ವರ್ಷ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ಓವರ್‌ಹೆಡ್ ಲೈನ್‌ಗಳ ಬದಲಾಗಿ ಭೂಗತ ಕೇಬಲ್ (Underground Cable) ಅಳವಡಿಸಬೇಕು.
ಬೈಲೂರು  ಮತ್ತು ಕಣಕುಂಬಿ ಗ್ರಾಮಗಳಲ್ಲಿ ಹೊಸ ವಿದ್ಯುತ್ ಉಪಕೇಂದ್ರಗಳನ್ನು (Substations) ಸ್ಥಾಪಿಸಬೇಕು.
ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC):
 ಅಪಘಾತ ಪೀಡಿತ ಪ್ರದೇಶ ಹಾಗೂ ದುರ್ಗಮ ಭೌಗೋಳಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಾಂಬೋಟಿ ಮತ್ತು ಕುಂಭಾಡ ಗ್ರಾಮಗಳಲ್ಲಿ ತಕ್ಷಣವೇ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಬೇಕು.

ಮುಖ್ಯಮಂತ್ರಿಗಳ ಭರವಸೆ:
> ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಅವರು, ಖಾನಾಪುರ ತಾಲೂಕಿನ ಅಭಿವೃದ್ಧಿಗೆ ಅಗತ್ಯವಿರುವ ಧನಸಹಾಯ ಹಾಗೂ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ