Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ. ಲತಾ ಎ. ಸರ್ದಾರ್ ಅವರಿಗೆ ಕಾನೂನು ವಿಭಾಗದಲ್ಲಿ ಪಿ.ಎಚ್.ಡಿ.ಪದವಿ

ಡಾ. ಲತಾ ಎ. ಸರ್ದಾರ್ ಅವರಿಗೆ ಕಾನೂನು ವಿಭಾಗದಲ್ಲಿ ಪಿ.ಎಚ್.ಡಿ.ಪದವಿ*

ಬೆಳಗಾವಿ: ಕೆ.ಎಲ್.ಇ. ಸೊಸೈಟಿಯ ಬಿ.ವಿ. ಬೆಲ್ಲದ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಲತಾ ಎ. ಸರ್ದಾರ್ ಅವರು ರೇವಾ ವಿಶ್ವವಿದ್ಯಾಲಯ, ಬೆಂಗಳೂರು ವತಿಯಿಂದ ಕಾನೂನು ವಿಭಾಗದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿಯನ್ನು ಪಡೆದಿದ್ದಾರೆ.  
ಅವರು ಡಾ. ಆರತಿ ತ್ಯಾಗಿ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ “ಕರ್ನಾಟಕದಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳಿಗೆ ಇರುವ ಅಡೆತಡೆಗಳ ಕುರಿತು ಸಾಮಾಜಿಕ-ಕಾನೂನು ಅಧ್ಯಯನ: ಒಂದು ವಿಮರ್ಶಾತ್ಮಕ ವಿಶ್ಲೇಷಣೆ” ಆಗಿದೆ. ಈ ಸಂಶೋಧನೆಯು ಕರ್ನಾಟಕದಲ್ಲಿನ ಲಿಂಗತ್ವ ಅಲ್ಪಸಂಖ್ಯಾತರು ಎದುರಿಸುತ್ತಿರುವ ಕಾನೂನು, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಥಿಕ ಸವಾಲುಗಳನ್ನು ಆಳವಾಗಿ ವಿಶ್ಲೇಷಿಸುವುದರ ಜೊತೆಗೆ, ಅವರ ಸಾಂವಿಧಾನಿಕ, ಕಾನೂನುಬದ್ಧ ಮತ್ತು ಮಾನವ ಹಕ್ಕುಗಳ ಪರಿಣಾಮಕಾರಿ ರಕ್ಷಣೆಗೆ ಸೂಕ್ತ ಶಿಫಾರಸುಗಳನ್ನು ನೀಡುತ್ತದೆ.  
ಡಾ. ಲತಾ ಎ. ಸರ್ದಾರ್ ಅವರ ಈ ಶೈಕ್ಷಣಿಕ ಸಾಧನೆಯನ್ನು ಕೆ.ಎಲ್.ಇ. ಸೊಸೈಟಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು, ಜೊತೆಗೆ ರೇವಾ ವಿಶ್ವವಿದ್ಯಾಲಯದ ಅಧಿಕಾರಿಗಳು ಅಭಿನಂದಿಸಿದ್ದು, ಅವರ ಮುಂದಿನ ಶೈಕ್ಷಣಿಕ, ಸಂಶೋಧನಾ ಹಾಗೂ ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.  

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST