Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆ

ಬೈಲೂರು ಗ್ರಾಮದಲ್ಲಿ ಹೆಸ್ಕಾಂ 33/11 ಕೆವಿ ಉಪಕೇಂದ್ರ ಸ್ಥಾಪನೆಗೆ  ಶಾಸಕರ ಮುತುವರ್ಜಿ

Advertisement

ಖಾನಾಪುರ : ಖಾನಾಪುರ ತಾಲೂಕಿನ ಬೈಲೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.

ಖಾನಾಪುರ ತಾಲೂಕಿನ ಬೈಲೂರು ಗ್ರಾಮದಲ್ಲಿ ನೂತನ ಹೆಸ್ಕಾಂ  33/11 ಕೆವಿ ಉಪಕೇಂದ್ರ ನಿರ್ಮಾಣದ ಬೇಡಿಕೆ ಇದೆ.
 
ಉಪಕೇಂದ್ರ ನಿರ್ಮಾಣಕ್ಕೆ ಉದ್ದೇಶಿಸಲಾದ ಜಾಗವನ್ನು ಪಂಚಾಯಿತಿಯಿಂದ ಲೀಸ್ (ಗುತ್ತಿಗೆ) ಆಧಾರದ ಮೇಲೆ ಪಡೆಯಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಜಾಗದ ಹಸ್ತಾಂತರ ಪ್ರಕ್ರಿಯೆಯು ನನೆಗುದಿಗೆ ಬಿದ್ದಿತ್ತು. ಇದಕ್ಕೆ ಶಾಸಕರಿಂದ ಸ್ಥಳದಲ್ಲೇ ಪರಿಹಾರ ದೊರೆತಿದೆ. 
ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆ ಎಷ್ಟು ಮುಖ್ಯ ಎಂಬುದನ್ನು ಅರಿತ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರು ಸ್ವತಃ ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ  ಸುದೀರ್ಘವಾಗಿ ಚರ್ಚಿಸಿದ ಶಾಸಕರು, ಜಾಗದ ಹಸ್ತಾಂತರ ಪ್ರಕ್ರಿಯೆಯಲ್ಲಿ ಎದುರಾಗಿರುವ ತಾಂತ್ರಿಕ ಅಡಚಣೆಯನ್ನು ನಿವಾರಿಸಿ, ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮತ್ತು ಕಾಮಗಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
 
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ, ಸಾರ್ವಜನಿಕರ ಹಿತರಕ್ಷಣೆಗೆ ಶಾಸಕರು ಬದ್ದತೆ ತೋರಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈಜು ಬಾರದ ಅಣ್ಣ-ತಮ್ಮ ನೀರುಪಾಲುಈಜಲು ಹೋದ ಬಾಲಕ ಸಾವುಶಿವಗಿರಿ ಸೊಸೈಟಿ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಬೈಲೂರು ಗ್ರಾಮದಲ್ಲಿ ಹೆಸ್ಕಾಂ 33/11 ಕೆವಿ ಉಪಕೇಂದ್ರ ಸ್ಥಾಪನೆಗೆ  ಶಾಸಕರ ವಿಶೇಷ ಮುತುವರ್ಜಿವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ10 ಗಂಟೆ ಒಳಗೆ ಕಚೇರಿಯಲ್ಲಿರಿರಾಜ್ಯಸಭೆ, ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗು