Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ಉನ್ನತ ನಕ್ಸಲ್ ಕಮಾಂಡರ್‌ ಸೇರಿ 10 ನಕ್ಸಲೀಯರು ಎನ್ ಕೌಂಟರಿನಲ್ಲಿ ಸಾವು

ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ ಮತ್ತು ಇತರ ಒಂಬತ್ತು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದವರಲ್ಲಿ ಉನ್ನತ ನಕ್ಸಲ್ ನಾಯಕ ಮನೋಜ ತಲೆಗೆ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಎನ್‌ಕೌಂಟರ್ ಬಗ್ಗೆ ವಿವರಗಳನ್ನು ನೀಡಿದ ರಾಯ್ಪುರದ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮರೇಶ ಮಿಶ್ರಾ ಅವರು, ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಮೈನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದರು.
“ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – ಸಿಆರ್‌ಪಿಎಫ್‌ನ ಗಣ್ಯ ಘಟಕ) ಮತ್ತು ಇತರ ರಾಜ್ಯ ಪೊಲೀಸ್ ಘಟಕಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗುಂಡಿನ ಚಕಮಕಿ ಇನ್ನೂ ನಡೆದಿದೆ” ಎಂದು ಮಿಶ್ರಾ ಹೇಳಿದ್ದಾರೆ.
ನಕ್ಸಲರ ವಿರುದ್ಧ ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪಡೆಗಳು ಅನೇಕ ಕಾರ್ಯಾಚರಣೆಗಳನ್ನು ನಡೆಸಿವೆ. ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ನಕ್ಸಲರನ್ನು ಕೊನೆಗೊಳಿಸುವ ಗುರಿಯನ್ನು ಮಾರ್ಚ್ 31, 2026ರ ವರೆಗೆ ನೀಡಿದ್ದಾರೆ ಎಂಬುದನ್ನು ಗಮನಿಸಬೇಕು.

16 ನಕ್ಸಲರು ಶರಣು….
ದಿನದ ಆರಂಭದಲ್ಲಿ, ವಿವಿಧ ಘಟಕಗಳ ಕೆಳವರ್ಗದ ಕೇಡರ್‌ಗಳಿಗೆ ಸೇರಿದ 16 ನಕ್ಸಲರು ನಾರಾಯಣಪುರ ಜಿಲ್ಲೆಯಲ್ಲಿ ಶರಣಾಗಿದ್ದಾರೆ. ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ. ಪೊಲೀಸರ ಪ್ರಕಾರ, ನಕ್ಸಲರು ಅವರಿಂದ ಮುಗ್ಧ ಬುಡಕಟ್ಟು ಜನಾಂಗದವರ ಮೇಲೆ ನಡೆದ ದೌರ್ಜನ್ಯಗಳಿಂದ ನಿರಾಶೆಗೊಂಡಿದ್ದಾರೆ.
“ಟೊಳ್ಳು” ಮಾವೋವಾದಿ ಸಿದ್ಧಾಂತ, ಮುಗ್ಧ ಬುಡಕಟ್ಟು ಜನಾಂಗದವರ ಮೇಲೆ ನಕ್ಸಲರು ನಡೆಸಿದ ದೌರ್ಜನ್ಯಗಳು ಮತ್ತು ನಿಷೇಧಿತ ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಅವರು ನಿರಾಶೆಗೊಂಡಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಅವರು ತಿಳಿಸಿದ್ದಾರೆ.
ಜನತಾನ ಸರ್ಕಾರ್, ಚೇತನ ನಾಟ್ಯ ಮಂಡಳಿ ಮತ್ತು ಮಾವೋವಾದಿಗಳ ಪಂಚಾಯತ್ ಮಿಲಿಟಿಯಾ ಸದಸ್ಯರು ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಕೆಳ ಹಂತದ 16 ನಕ್ಸಲರು ಶರಣಾಗಿದ್ದಾರೆ ಎಂದು ಅವರು ಹೇಳಿದರು

ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ
ಇದೇ ವೇಳೆ, ಮತ್ತೊಂದು ಘಟನೆಯಲ್ಲಿ, ದಾಂತೇವಾಡ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಇಂದ್ರಾವತಿ ನದಿಯ ಸಾತ್‌ಧಾರ್ ಸೇತುವೆಯ ಬಳಿ ಸ್ಫೋಟ ಸಂಭವಿಸಿದೆ. ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಸುಧಾರಿತ ವೈದ್ಯಕೀಯ ಸೌಲಭ್ಯಕ್ಕೆ ಸ್ಥಳಾಂತರಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ