Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಪೂರ್ಣ

 

ಬೆಳಗಾವಿ :
“ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಪರಿಷತ್ ನಲ್ಲಿ ಗುರುವಾರ ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಪ್ರಶನೋತ್ತರ ಕಲಾಪದಲ್ಲಿ ತಳವಾರ ಸಾಬಣ್ಣ ಅವರು, “ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯಲ್ಲಿರುವ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಕಳೆದ 5 ವರ್ಷಗಳಲ್ಲಿ ಮಾಡಿದ ವೆಚ್ಚ, ಕಾಲುವೆಗಳ ದುಸ್ಥಿತಿ ಸೇರಿದಂತೆ ಅಧಿಕಾರಿಗಳ, ಗುತ್ತಿಗೆದಾರರ ವಂಚನೆ” ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

“ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ತಯಾರಾಗಬೇಕು. ಈ ವೇಳೆ ಆಂಧ್ರ ಮತ್ತು ತೆಲಂಗಾಣ ರಾಜ್ಯದವರು ಗೆಜೆಟ್ ತಯಾರಿಸದಂತೆ ನ್ಯಾಯಲಯದ ಮೊರೆ ಹೋದ ಕಾರಣ ಕೆಲಸ ಮುಂದುವರೆದಿಲ್ಲ. ಬೂದಿಹಾಳ- ವೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯ ಕೃಷ್ಣ ಜಲಭಾಗ್ಯ ನಿಗಮದ ಯೋಜನೆಗಳಿಗೆ 1,306 ಕೋಟಿ ಹಣವನ್ನು ಕಳೆದ 5 ವರ್ಷದಲ್ಲಿ ವೆಚ್ಚ ಮಾಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ 11 ಯೋಜನೆಗಳಿಗೆ ಕಳೆದ 5 ವರ್ಷದಲ್ಲಿ 489 ಕೋಟಿ ಹಣ ವೆಚ್ಚ ಮಾಡಲಾಗಿದೆ” ಎಂದು ತಿಳಿಸಿದರು.

“ಹೂಳು, ಅವಶ್ಯಕ ದುರಸ್ತಿ ಸೇರಿದಂತೆ ನೀರು ಹರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಎಲ್ಲಾ ಟೆಂಡರ್ ಗಳನ್ನು ಈ- ಪ್ರಕ್ಯೂರ್ಮೆಂಟ್ ಮೂಲಕವೇ ಪಾರದರ್ಶಕವಾಗಿ ಮಾಡಲಾಗಿದೆ. ಗುಣಮಟ್ಟ ಖಾತರಿಗೂ ಆದ್ಯತೆ ನೀಡಲಾಗಿದ್ದು, ಯಾವುದೇ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳನ್ನು ನೀಡುತ್ತಿಲ್ಲ” ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ