Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರು ಹರಿದು 48 ಕುರಿಗಳ ಸಾವು

ಬೆಳಗಾವಿ: ಕಾರು ಹರಿದು 48 ಕ್ಕೂ ಕುರಿಗಳು ಸಾವನ್ನಪ್ಪಿದ್ದು, 15 ಹೆಚ್ಚು ಕುರಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದ ಬಳಿ ನಡೆದಿದೆ.

ಕೆಂಗಾನೂರ ಗ್ರಾಮದ ಚಂದ್ರಪ್ಪ ರಾಯಪ್ಪ ಹಿತ್ತಲಮನಿ ಹಾಗೂ ದೊಡವಾಡ ಗ್ರಾಮದ ಬೀರಪ್ಪ ಅವರ ಕುರಿಗಳ ಹಿಂಡನ್ನು ನಯಾನಗರ ಸಮೀಪದ ಮಲಪ್ರಭಾ ನದಿಯ ದಂಡೆಯ ಬಳಿ ಮೇಯಲು ಬಿಡಲಾಗಿತ್ತು. ಮೇಯಿಸಿಕೊಂಡು ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕೆಂಗಾನೂರ ಗ್ರಾಮದತ್ತ ಹಿಂಡು ಕರೆದುಕೊಂಡು ತೆರಳುತ್ತಿದ್ದಾಗ, ಬೈಲಹೊಂಗಲದಿಂದ ಬೆಳವಡಿ ಕಡೆಗೆ ವೇಗವಾಗಿ ಸಾಗುತ್ತಿದ್ದ ಕೆಎ–48 ಎಂ–1789 ಸಂಖ್ಯೆಯ ಟಾಟಾ ಇಂಡಿಗೋ ಕಾರು ನೇರವಾಗಿ ಕುರಿಗಳ ಹಿಂಡಿನೊಳಗೆ ನುಗ್ಗಿದೆ.

ಅಪಘಾತದ ರಭಸಕ್ಕೆ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಮರಿಗಳು ಹೊರಬಂದ ದೃಶ್ಯ ಕಂಡ ಸ್ಥಳೀಯರು ಕಣ್ಣೀರಿಟ್ಟರು. ರಸ್ತೆ ತುಂಬಾ ಚದುರಿಬಿದ್ದಿದ್ದ ಕುರಿಗಳ ಮೃತದೇಹಗಳು ಹಾಗೂ ಗಾಯಗೊಂಡ ಕುರಿಗಳ ನರಳಾಟ ನೋಡುಗರ ಮನಕಲಕುವಂತಿತ್ತು.

ಈ ದುರ್ಘಟನೆಯಿಂದ ಕುರಿ ಸಾಕಾಣಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಕುರಿಗಾಹಿಗಳ ಕುಟುಂಬಕ್ಕೆ ಅಪಾರ ಸುಮಾರು 20 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ. ಕ್ಷಣಾರ್ಧದಲ್ಲಿ ತಮ್ಮ ಬದುಕಿನ ಆಧಾರವಾಗಿದ್ದ ಕುರಿಗಳನ್ನು ಕಳೆದುಕೊಂಡ ಮಾಲೀಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು ತರಿಸಿತು. ಅಪಘಾತದ ಬಳಿಕ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ 112 ತುರ್ತು ಸೇವೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತ ಕುರಿಗಳನ್ನು ಮೂರು ಗಂಟೆಗಳ ಕಾಲ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿಜ್ಯ ಬಳಕೆ ಎಲ್‌ಪಿಜಿ ದರ ಮತ್ತೆ ಇಳಿಕೆಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !150 ವರ್ಷಗಳ ನಂತರ ಗ್ರಂಥಾಲಯಕ್ಕೆ ವಾಪಸ್ ಬಂದ ಅಪರೂಪದ ಪುಸ್ತಕ ; ಈಗ ಅದರ ದಂಡದ ಮೊತ್ತವೇ ₹19 ಲಕ್ಷ…!ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆಕಾರು ಹರಿದು 48 ಕುರಿಗಳ ಸಾವುಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ ಕೆ ಶಿವಕುಮಾರ್ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ವಿಚಿತ್ರ ಕಳ್ಳತನ : ದೇವರ ಕ್ಷಮೆ ಕೋರಿ ದೇವಾಲಯದ ಹುಂಡಿ ದೋಚಿದ ಕಳ್ಳರು…!ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿಸಿ:  ಕೇಂದ್ರ ಸಚಿವರೊಂದಿಗೆ ಸಂಸದ ಶೆಟ್ಟರ ಚರ್ಚೆಮಾಜಿ ಬಸ್ ಚಾಲಕನ ಮನೆಯಲ್ಲಿ ₹28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ….!