Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪಿತನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪಿತನಿಗೆ ಪೋಕ್ಸೋ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಫಿರ್ಯಾದಿ ಮಗಳು ನೊಂದ ಬಾಲಕಿ ಇವಳು ಅಪ್ರಾಪ್ತ ವಯಸ್ಸಿನವಳು ಅಂತಾ ಗೊತ್ತಿದರೂ ಆರೋಪಿ ಗಜಾನನ ಅಣ್ಣಪ್ಪ ಪಾಟೀಲ
(35) ಮಾರುತಿ ನಗರ 3 ನೇ ಕ್ರಾಸ್, ಎಸ್.ವಿ.ಮೋಟರ್ ಹತ್ತಿರ ಬೆಳಗಾವಿ ಇವನು ದಿನಾಂಕ 11-07-2023 ಬಾಲಕಿಗೆ ಲೈಂಗಿಕ ಹಲ್ಲೆ ಮತ್ತು ಅಪಹರಣ ಮಾಡುವ ದುರುದ್ದೇಶದಿಂದ ಅವಳಿಗೆ ಒತ್ತಾಯಪೂರ್ವಕವಾಗಿ ಅಡ್ಡಗಟ್ಟಿ ನಿಲ್ಲಿಸಿ ಅವಳು ಬೇಡ ಬೇಡ ಅಂದರು ಸಹ ಅವಳ ಮೈಕೈ ಮುಟ್ಟಿ ಬೆದರಿಕೆ ಹಾಕಿ ಅವಳನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು ಅಲ್ಲಿಂದ ಹೋಗಿದ್ದಾನೆ. ಆಗ ಬಾಲಕಿ ಹಿಂದಿ ಭಾಷೆಯಲ್ಲಿ ನೀನು ಯಾರು ನನಗೆ ಏಕೆ ಕಿಡ್ನಾಪ್ ಮಾಡುತ್ತಿರುವೆ ಎಂದು ಕೇಳಿದಾಗ, ಆರೋಪಿತನು ಬಾಲಕಿಗೆ ನಿಮ್ಮ ಮಮ್ಮಿ ಕಿಡ್ನಾಪ್ ಆಗಿರುತ್ತಾಳೆ. ಅವಳ ಹತ್ತಿರ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದಿದ್ದಾನೆ.
ಆಗ ಬಾಲಕಿ ನನ್ನನ್ನು ಅಪಹರಣ ಮಾಡುತ್ತಿದ್ದಾರೆ ಎಂದು ಕೂಗಿದಾಗ ಆತ ಅವಳನ್ನು ಅಲ್ಲಿಯೇ ಬಿಟ್ಟು ಓಡಿದ್ದಾನೆ. ಈ ಎಲ್ಲಾ ಅಪರಾಧಕ್ಕೆ ಶ್ವೇತಾ ಪಿ.ಎಸ್‌.ಐ ಇವರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆಯನು ತನಿಖಾಧಿಕಾರಿ ಸಂತೋಷ ದಳವಾಯಿ ಸಿ.ಪಿ.ಐ, ಟಿಳಕವಾಡಿ ಅವರು ಪ್ರಕರಣದ ಮುಂದಿನ ತನಿಖೆ ಮಾಡಿ ಪ್ರಕರಣವನ್ನು ಮಾನ್ಯ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕೋ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದು, ಮಾನ್ಯ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಇವರು ಪ್ರಕರಣವನ್ನು ವಿಚಾರಣೆ ಮಾಡಿ, ಒಟ್ಟು 7 ಸಾಕ್ಷಿಗಳ ವಿಚಾರಣೆ ಮೇಲಿಂದ ಹಾಗೂ 27 ದಾಖಲೆಗಳು, 2 ಮುದ್ದೆಮಾಲುಗಳ ಆಧಾರದ ಮೇಲಿಂದ ಆರೋಪಿ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿ, ಆರೋಪಿತನಿಗೆ ಐಪಿಸಿ ಕಲಂ 363 ರಡಿ 7 ವರ್ಷ ಕಾರಾಗೃಹ ಶಿಕ್ಷೆ ದಂಡ ರೂ 50,000/- ಪೋಕ್ಸೊ ಕಲಂ 8 ಪ್ರಕಾರ 05 ವರ್ಷಗಳ ಕಠಿಣ ಕಾರಾಗೃಹ ತೀಕ್ಷೆ &ದಂಡ ರೂ 10,000/- ರೂಪಾಯಿ & ಮಾನ್ಯ ನ್ಯಾಯಾಲಯವು ತೀರ್ಪು ನೀಡಿದ್ದು ಮತ್ತು ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂಪಾಯಿ 01 ಲಕ್ಷಗಳನ್ನು ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿರುತ್ತದೆ. ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ 05 ವರ್ಷಗಳವರೆಗೆ ಮುದ್ದತ್ ಠೇವಣಿಯಾಗಿ ಇಡಲು ಮಾನ್ಯ ನ್ಯಾಯಾಲಯವು ಆದೇಶ ಮಾಡಿರುತ್ತಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ಎಲ್. ವಿ ಪಾಟೀಲ, ವಿಶೇಷ ಸರ್ಕಾರಿ ಅಭಿಯೋಜಕರು, ಬೆಳಗಾವಿ ಇವರು ಹಾಜರಾಗಿ ಪ್ರಕರಣವನ್ನು ನಡೆಸಿ ಹಾಗೂ ವಾದ ಮಂಡಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ