Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

31 ವರ್ಷಗಳ ಹಳೆಯ ಕೇಸ್ : ಕೊನೆಗೂ ಸುಖಾಂತ್ಯವಾಗುತ್ತಾ ?

 

ಹುಬ್ಬಳ್ಳಿ:
1992ರ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಶ್ರೀಕಾಂತ ಪೂಜಾರಿ ಅವರ ಬಂಧನ ಖಂಡಿಸಿ ನಗರದ ಶಹರ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದ್ದ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು, ಡಿಸಿಪಿ ರಾಜೀವ್‌ ಎಂ. ಅವರು ಭರವಸೆ ನೀಡಿದ ಬಳಿಕ ಧರಣಿ ವಾಪಸ್‌ ಪಡೆದರು.

ಡಿಸಿಪಿ ರಾಜೀವ್‌ ಎಂ. ಅವರು ಪೊಲೀಸ್‌ ಅಧಿಕಾರಿಗಳ ಜೊತೆ ಸೇರಿ ಪ್ರತಿಭಟನಕಾರರ ಮನವೊಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992ರ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್‌ ಅವರು ಆರೋಪಿ ಬಂಧನಕ್ಕೆ ಮೊದಲು ವಾರಂಟ್ ನೀಡದ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಆಂತರಿಕ ತನಿಖೆ ನಡೆಸುತ್ತೇವೆ. ಕ್ರಮ ತಪ್ಪಾಗಿದ್ದರೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಕೆಲವು ಪ್ರಕರಣದಲ್ಲಿ ಅಧಿಕಾರಿಗಳು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತೇವೆ ಎಂದು ತಿಳಿಸಿದರು.

ಆರೋಪಿಯನ್ನು ಬಂಧಿಸಿರುವ ಸಂದರ್ಭ ತಪ್ಪಾಗಿತ್ತು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ಡಿಸಿಪಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಸಂಜಯ್ ಬಡಸ್ಕರ್ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ