Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶದಲ್ಲಿ ಹೊಸ ನಗರ ರಚನೆಗೆ ಕೇಂದ್ರ ಚಿಂತನೆ

 

ನವದೆಹಲಿ:
ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆ ತಗ್ಗಿಸಲು ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ಯೋಜನೆಯು ಕೇಂದ್ರದ ಪರಿಗಣನೆಯಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ದೇಶದಲ್ಲಿ ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು 15ನೇ ಹಣಕಾಸು ಆಯೋಗವು ತನ್ನ ವರದಿಯೊಂದರಲ್ಲಿ ಶಿಫಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ. ಬಿ. ಸಿಂಗ್ ಹೇಳಿದ್ದಾರೆ.

`ಅರ್ಬನ್ 20' ಎಂಬ ಹೆಸರಿನ ಸಭೆಯ ನಂತರ ಸಿಂಗ್ ಪಿಟಿಐ ಜೊತೆ ಮಾತನಾಡಿದರು.

ಹಣಕಾಸು ಆಯೋಗದ ಶಿಫಾರಸಿನ ನಂತರ, 26 ಹೊಸ ನಗರಗಳಿಗಾಗಿ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ಪರಿಶೀಲನೆಯ ನಂತರ ಎಂಟು ಹೊಸ ನಗರಗಳನ್ನು ಅಭಿವೃದ್ಧಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಹೊಸ ನಗರಗಳನ್ನು ಎಲ್ಲಿ ನಿರ್ಮಿಸಲಾಗುತ್ತದೆ, ಯಾವಾಗ ನಿರ್ಮಿಸಲಾಗುತ್ತದೆ ಎಂಬ ವಿಷಯವನ್ನು ಸರ್ಕಾರವು ಸೂಕ್ತ ಸಮಯದಲ್ಲಿ ಪ್ರಕಟಿಸಲಿದೆ ಎಂದು ಅವರು ಹೇಳಿದರು.

ಈಗಿರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ನಾವು ದೇಶದಲ್ಲಿ ಹೊಸ ನಗರಗಳನ್ನು ನಿರ್ಮಿಸಬೇಕಾದ ಅಗತ್ಯವಿದೆ. ಅಸ್ತಿತ್ವದಲ್ಲಿರುವ ನಗರಗಳು ಅವ್ಯವಸ್ಥಿತ ರೀತಿಯಲ್ಲಿ ವಿಸ್ತರಣೆಗೊಳ್ಳುತ್ತಿವೆ. ಇದು ಮೂಲಭೂತ ಯೋಜನೆಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಸಿಂಗ್ ಹೇಳಿದರು.

ಹೊಸ ನಗರವನ್ನು ಅಭಿವೃದ್ಧಿಪಡಿಸಿದ್ದೇ ಆದರೆ, ಕನಿಷ್ಠ 200 ಕಿ.ಮೀ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದು ಅವರು ಹೇಳಿದರು.

ಹೊಸ ನಗರಗಳ ಸ್ಥಾಪನೆಗೆ ಆರ್ಥಿಕ ಮಾರ್ಗಸೂಚಿಯನ್ನು ಅಂತಿಮಗೊಳಿಸಿಲ್ಲ. ಆದರೆ, ಕೇಂದ್ರ ಸರ್ಕಾರವು ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ