Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಭಿನ್ನವಾಗಿ ನಡೆದ ಶಾಲಾ ಪ್ರಾರಂಭೋತ್ಸವ

Advertisement

ಗಣಿಕೊಪ್ಪ : ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಕ್ಕಳ ಗಮನ ಶಾಲೆಗೆ ಸೆಳೆಯಲು ಶಿಕ್ಷಣ ಕುರಿತು ಘೋಷವಾಕ್ಯಗಳು ಅದರ ಜೊತೆಗೆ ಟ್ರಾಕ್ಟರ್‌ಗೆ ರಿಬ್ಬನ್ ಹಾಗೂ ಬಲೂನ್‌ಗಳಿಂದ ಸಿಂಗರಿಸಿಲಾಗಿತ್ತು. ವಿಶೇಷವಾಗಿ ಗ್ರಾಮದ ಮಹಿಳೆಯರು ಕುಂಭ ಕೊಡ ಹೊತ್ತು ವಾದ್ಯ ಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದರು. ಗ್ರಾಮದಲ್ಲಿ ಒಂದು ಶಿಕ್ಷಣ ಜಾತ್ರೆಯ  ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕ ವೃಷಭೇಂದ್ರ ಮಾತನಾಡಿ ಹಳ್ಳಿಯ ಶಾಲೆಗಳು ಇನ್ನಷ್ಟು ಅಭಿವೃದ್ಧಿಯಾಗಲು ಎಲ್ಲರ ಸಹಕಾರ ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಮತ್ತು ಈ ಶಾಲೆಯಲ್ಲಿ ಶಿಕ್ಷಕರ ಮತ್ತು ಮಕ್ಕಳ ಉತ್ಸಾಹ ಹಾಗೂ ಊರಿನ ಜನರ ಸಹಕಾರ ಕಂಡು ಹರ್ಷ ವಾಗುತ್ತಿದೆ ಎಂದರು. 

ಕೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಮಾತನಾಡಿ, ಗಣಿಕೊಪ್ಪ ಶಾಲೆಯು ಸಾಕಷ್ಟು ಅಭಿವೃದ್ಧಿ ಹೊಂದಿದ್ದು ಒಂದು ಮಾದರಿ ಶಾಲೆಯಾಗಿ ಹೊರಹೊಮ್ಮುತ್ತಿದೆ. ಮಕ್ಕಳನ್ನು ಸೆಳೆಯಲು ಒಳ್ಳೆಯ ಶಿಕ್ಷಣದ ವ್ಯವಸ್ಥೆಯ ಜೊತೆ ಜೊತೆಗೆ ಪರಿಸರ ರಕ್ಷಣೆಗೂ ವಿಶೇಷ ಕಾಳಜಿಯನ್ನು ಈ ಶಾಲಾ ಶಿಕ್ಷಕರು. ಶಿಕ್ಷಕಿಯರು ಮಾಡುತ್ತಿರುವುದು ಹೆಮ್ಮೆಯ ಸಂಗತಿ ಇಂದಿನ ದಿನಮಾನಗಳಲ್ಲಿ ಸರಕಾರಿ ಶಾಲೆಗಳು ಎಂದರೆ ಅಸಡ್ಡೆ ಮಾಡುವ ಕಾಲದಲ್ಲಿ ಅದನ್ನು ಮೀರಿ ಈ ಶಾಲೆಯು ಬೆಳೆಯುತ್ತಿದೆ. ವಿಶೇಷವಾಗಿ ಎಲ್ಲ ಪಾಲಕರಿಗೆ ಹೂವಿನ ಸಸಿಗಳನ್ನು ಶಾಲೆಯ ಪರವಾಗಿ ನೀಡಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದರು. ಬೈಲಹೊಂಗಲ ಕ್ಷೇತ್ರ ಸಮನ್ವಯಾಧಿಕಾರಿ ರವಿ ಹಿರೇಮಠ, ಶಿಕ್ಷಣ ಸಂಯೋಜಕ ಎಸ್. ಪಿ ಯರಗಟ್ಟಿ, ಸಿಆರ್ಪಿಗಳಾದ  ಎಸ್. ಎನ್. ಮುಲ್ಲಾ, ದೈಹಿಕ ಶಿಕ್ಷಣ ಅಧಿಕಾರಿ ಕಾಂಬಳೆ, ಶಾಲೆಯ ಪ್ರಧಾನ ಗುರು ಎಂ. ಎ. ನದಾಫ್, ಸಹ ಶಿಕ್ಷಕರಾದ ಟಿ. ಬಿ. ಮಧುಭರಮಣ್ಣವರ ಶಾಲಾ ಶಿಕ್ಷಕವೃಂದ, ಎಸ್‌ಡಿಎಂಸಿ ಸದಸ್ಯರು, ಹಳೆಯ ವಿದ್ಯಾರ್ಥಿ ಬಳಗ ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು. ಸುನಿತಾ ಬನಸಿ ಸ್ವಾಗತಿಸಿದರು, ಪ್ರೇಮಾ ಗಾಬಿ ನಿರೂಪಿಸಿದರು, ವೀಣಾ ಹಿರೇಮಠ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ