Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತ್ರಿಚಕ್ರ ವಾಹನ ಅಪಘಾತ; ನಾವಲಗಟ್ಟಿ ಅಂಗವಿಕಲ ವ್ಯಕ್ತಿ ದುರ್ಮರಣ.

ತ್ರಿಚಕ್ರ ವಾಹನ ಅಪಘಾತ; ನಾವಲಗಟ್ಟಿ ಅಂಗವಿಕಲ ವ್ಯಕ್ತಿ ದುರ್ಮರಣ.

ಅಂಗವೈಕಲ್ಯ ಮೆಟ್ಟಿನಿಂತು ಸಾಧಕನಾಗಿದ್ದ ಗಣಪತಿ..!

ಬೆಳಗಾವಿ : ತ್ರಿಚಕ್ರ ವಾಹನದಿಂದ ಸಂಭವಿಸಿರುವ ಅಪಘಾತದಲ್ಲಿ ನಾವಲಗಟ್ಟಿ ಗ್ರಾಮದ ಅಂಗವಿಕಲ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ವ್ಯಾಪ್ತಿಯ ಹಿರೇಬಾಗೇವಾಡಿ- ಮೋದಗಾ ರಸ್ತೆಯಲ್ಲಿ ಇಂದು (ಭಾನುವಾರ) ಜರುಗಿದೆ.

ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ 40 ವರ್ಷದ ಗಣಪತಿ ಮುರಗೋಡ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಹುಟ್ಟುತ್ತಲೇ ಅಂಗವೈಕಲ್ಯ ಹೊಂದಿರುವ ಗಣಪತಿಗೆ ಸರ್ಕಾರದಿಂದ ತ್ರಿಚಕ್ರ ವಾಹನ ನೀಡಲಾಗಿತ್ತು. ಈ ವಾಹನದ ಮೂಲಕ ನಾವಲಗಟ್ಟಿ ಗ್ರಾಮದಿಂದ ಮೋದಗಾ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಗಣೇಶ ಮುರಗೋಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತರಿಗೆ ಪತ್ನಿ, ಮಕ್ಕಳು, ತಾಯಿ, ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವಿದೆ.

ಮೃತ ಗಣಪತಿ ಮುರಗೋಡ ಹುಟ್ಟುತ್ತಲೇ ಅಂಗವೈಕಲ್ಯನಾಗಿದ್ದರೂ ಅತ್ಯಂತ ಲವಲವಿಕೆ ಹಾಗೂ ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಹೊಂದಿದ್ದನು. ಈತ ಜನ ಸ್ನೇಹಿ ಹಾಗೂ ರೈತರ ಪರ ವಿಶೇಷ ಕಾಳಜಿ ಹೊಂದಿದನು. ತೋಟಗಾರಿಕೆ, ಕಂದಾಯ, ಕೃಷಿ ಇಲಾಖೆ ಸೇರಿದಂತೆ ಇನ್ನೀತರ ಸರ್ಕಾರಿ ಸೌಲಭ್ಯಗಳ ಕುರಿತು ನಾವಲಗಟ್ಟಿ ಗ್ರಾಮ ಅಷ್ಟೇ ಅಲ್ಲ ಸುತ್ತಮುತ್ತಲಿನ ಗ್ರಾಮಸ್ಥರಿಗೂ ಮಾಹಿತಿ ನೀಡಿ ಸೌಲಭ್ಯದಿಂದ ವಂಚಿತರಾಗದಂತೆ ಕಾರ್ಯ ಮಾಡುತ್ತಿದ್ದನು. ಗಣಪತಿ ಮುರಗೋಡನ ಅಕಾಲಿಕ ಸಾವಿನ ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರಿಗೆ ಬರಸಿಡಿಲು ಬಡದಂತಾಗಿದೆ ಅಲ್ಲದೇ ಗ್ರಾಮಸ್ಥರ ಹಾಗೂ ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದೆ.

ಈ ದುರ್ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ