Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಲ ಮರಳಿಸಲು ತಡವಾಗಿದ್ದಕ್ಕೆ ಗೃಹ ಬಂಧನ : ಆತ್ಮಹತ್ಯೆ ಮಾಡಿಕೊಂಡ ರೈತ

ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿದ್ದಕ್ಕೆ ನೊಂದುಕೊಂಡ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ.

ರಾಜು ಖೋತಗಿ ಆತ್ಮಹತ್ಯೆ ಮಾಡಿಕೊಂಡವರು. ಇಸ್ಲಾಂಪುರದ ಸಿದ್ಧವ್ವ ಎಂಬ ಮಹಿಳೆ ರಾಜು ಅವರ ಪತ್ನಿ ದುರ್ಗವ್ವ, ಪುತ್ರ ಬಸವರಾಜ ಅವರನ್ನು ಗೃಹ ಬಂಧನದಲ್ಲಿರಿಸಿದ್ದರು ಎಂಬ ಆರೋಪ ಕೇಳಿ ಬಂದಿದ್ದು ಗೃಹ ಬಂಧನದಲ್ಲಿದ್ದ ವೇಳೆ ನೀರು, ಅನ್ನ ನೀಡದೆ ಎರಡು ದಿನ ಶಿಕ್ಷೆ ನೀಡಿದ್ದಾರೆ ಎನ್ನಲಾಗಿದೆ. ಜೀವನ ನಿರ್ವಹಣೆಗೆ ಸಿದ್ದವ್ವ ಬಳಿ ತಿಂಗಳ ಹಿಂದೆ ರಾಜು ಅವರು ಒಂದೂವರೆ ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಇದಕ್ಕೆ ಪ್ರತಿ ತಿಂಗಳು ಶೇಕಡಾ 10 ರಷ್ಟು ಬಡ್ಡಿ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಸಾಲ ಮರಳಿಸುವಂತೆ ಸಿದ್ದವ್ವ ತಿಳಿಸಿದ್ದಾಳೆ. ಆಗ ರಾಜು ಇನ್ನು ಒಂದೆರಡು ದಿನ ಕಾಲಾವಕಾಶ ಕೇಳಿದರು. ಇದಕ್ಕೆ ಒಪ್ಪದ ಸಿದ್ಧವ್ವ ಸಾಲ ಮರಳಿಸುವವರೆಗೆ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಾಳೆ. ಸಂಜೆಯಾದರೂ ಪುತ್ರನನ್ನು ಬಿಡದೆ ಇದ್ದಾಗ ಸಿದ್ಧವ್ವಳ ಮನೆಗೆ ರಾಜು ಮತ್ತು ಅವರ ಪತ್ನಿ ದುರ್ಗವ್ವ ಹೋಗಿದ್ದಾರೆ. ಆಗ ಪುತ್ರ ಬಸವರಾಜನನ್ನು ಬಿಟ್ಟು ರಾಜು ಮತ್ತು ದುರ್ಗವ್ವರನ್ನು ಮನೆಯಲ್ಲಿ ಕೂರಿಸಲಾಗಿದೆ. ಮರುದಿನ ರಾಜುವನ್ನು ಬಿಟ್ಟು ಬಸವರಾಜು ಮತ್ತು ದುರ್ಗವ್ವರನ್ನು ಗೃಹಬಂಧನದಲ್ಲಿ ಇರಿಸಿದ್ದರು. ಇದರಿಂದ ಬೇಸರ ಪಟ್ಟ ರಾಜು ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬರಗಾಲದಿಂದ ಬೆಳೆದಿದ್ದ ಬೆಳೆಗಳು ಕೈಕೊಟ್ಟಿದ್ದರಿಂದ ರಾಜು ಅವರು ಸಿದ್ದವ್ವ ಬಳಿ ಸಾಲ ಪಡೆದಿದ್ದರು. ಆದರೆ ಸಿದ್ದವ್ವ ಈ ಕುಟುಂಬವನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಬೆಳಿಗ್ಗೆಯಿಂದ ಸಂಜೆವರೆಗೂ ದೂರು ದಾಖಲು ಮಾಡಿಕೊಳ್ಳಲಿಲ್ಲ ಎಂದು ದುರ್ಗವ್ವ ಮತ್ತು ಕುಟುಂಬಸ್ಥರು ವಿರುದ್ಧ ಇದೀಗ ಆರೋಪ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ