Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅದ್ದೂರಿಯಾಗಿ ನಡೆದ ಜಗಜ್ಯೋತಿ ಬಸವೇಶ್ವರ ಉತ್ಸವದ ಬೃಹತ್ ಮೆರವಣಿಗೆ

ಬೆಳಗಾವಿ: ಬಸವಣ್ಣನವರ ವಚನ ಸಂದೇಶ ಸಾರುವ ಉದ್ದೇಶದಿಂದ ಬಸವ ಜಯಂತಿ ನಿಮಿತ್ತ ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ನಗರದ ವಿವಿಧ ಗಲ್ಲಿಯಲ್ಲಿ ಜಗಜ್ಯೋತಿ ಬಸವೇಶ್ವರ ಉತ್ಸವ ಜ್ಯೋತಿ ಮೆರವಣಿಗೆ ನಡೆಸಲಾಯಿತು.

ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಸವಣ್ಣನವರ ಉತ್ಸವದ ನಿಮಿತ್ತ ಕಳೆದ ಒಂದು ವಾರದಿಂದ ವಿವಿಧ ಸಂಘಟನೆಗಳು ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವು. ಇಂದು ಬೃಹತ್ ಮೆರವಣಿಗೆಯನ್ನು ಎಲ್ಲ ಸಂಘಟನೆಗಳು ಕೂಡಿ ನಡೆಸಿದರು. ಕೊನೆಗೆ ಬೃಹತ್ ಮೆರವಣಿಗೆಯು ಆರ್ ಎಲ್ಎಸ್ ಕಾಲೇಜಿನ ಬಳಿ ಕೊನೆಗೊಂಡಿತ್ತು.

ಜಗಜ್ಯೋತಿ ಬಸವೇಶ್ವರ ಉತ್ಸವ ಜ್ಯೋತಿ ಮೆರವಣಿಗೆಗೆ ವಿವಿಧ ಮಠಾದೀಶರು ಚಾಲನೆ ನೀಡಿದರು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಬಸವಾದಿ ಶರಣರ ವಚನ ಸಂದೇಶ ಸಾರುವುದು ಮೆರವಣಿಗೆಯ ಉದ್ದೇಶವಾಗಿತ್ತು.

ಸಂಸ್ಕೃತಿ ಕಲಾ ವಾದ್ಯ, ಮಕ್ಕಳ ಮೂಲಕ ಬಸವಣ್ಣನವರ ವಚನಗಳ ಸಂದೇಶದ ಘೋಷ ವಾಕ್ಯಗಳು, ವಾದ್ಯಮೇಳ , ವಚನ ಸಂಗೀತ ಮೆರವಣಿಗೆಯ ಆಕರ್ಷಿಸಿತು. ಚನ್ನಮ್ಮ ವೃತ್ತದಿಂದ ಬಸವಣ್ಣನವರ ಮೂರ್ತಿ ರೂಪಕ ವಾಹನ ಹೊರಡಿತು. 30 ಕ್ಕೂ ಹೆಚ್ಚು ಮಠಾದೀಶರು, 15 ಕ್ಕೂ ಹೆಚ್ಚು ಸಂಘ- ಸಂಸ್ಥೆಗಳು ಭಾಗವಹಿಸಿದರು.

ಲಿಂಗಾಯತ ಸಂಘಟನೆಗಳು, ಒಳಪಂಗಡಗಳು ಬೇರೆಯಾಗಿವೆ ಎಂಬ ಮನೋಭಾವನೆ ಎಲ್ಲರಲ್ಲೂ ಮೂಡಿದೆ. ಹೀಗಾಗಿ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಮಾಜಕ್ಕೆ ತಿಳಿಸಲು ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಾವಿರಾರು ಬಸವ ಭಕ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಂಸದ ಜಗದೀಶ ಶೆಟ್ಟರ್, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೊರೆ, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ದುರ್ಯೋಧನ ಐಹೊಳೆ, ಮಾಜಿ ಎಂಎಲಸ್ ಸಿ ಮಹಾಂತೇಶ ಕವಟಗಿಮಠ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ