Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಬೀಡು ಬಿಟ್ಟ ಶಕ್ತಿಕೇಂದ್ರ !

 

ಜನಜೀವಾಳ ವಿಶೇಷ ಬೆಳಗಾವಿ :
ಕರ್ನಾಟಕ ವಿಧಾನ ಮಂಡಲದ ವಿಶೇಷ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗುತ್ತಿದೆ. ಏಪ್ರಿಲ್, ಮೇ ತಿಂಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿರುವುದರಿಂದ ಬಸವರಾಜ ಬೊಮ್ಮಾಯಿ ನೇತ್ರತ್ವದ ಬಿಜೆಪಿ ಸರಕಾರಕ್ಕೆ
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಕೊನೆಯದು ಎನ್ನಬಹುದು. ಮುಂದಿನ ಅಧಿವೇಶನ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರಕಾರದ ಪಾಲಿಗೆ ಬೆಳಗಾವಿ ಅಧಿವೇಶನ ಅತ್ಯಂತ ನಿರ್ಣಾಯಕವಾಗಿದೆ.

ಉತ್ತರ ಕರ್ನಾಟಕದ ಜನರ ಮನಸ್ಸನ್ನು ಗೆಲ್ಲುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನ ಅತ್ಯಂತ ಅರ್ಥಪೂರ್ಣವಾಗಿ ನಡೆಯಲಿ ಎನ್ನುವುದು ಈ ಭಾಗದ ಜನರ ಆಶಯವಾಗಿದೆ. ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಅಧಿವೇಶನ ಸ್ಪಂದಿಸಬೇಕು ಎನ್ನುವುದು ಜನತೆಯ ಆಗ್ರಹವಾಗಿದೆ. ಸೋಮವಾರದಿಂದ ಆರಂಭವಾಗುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ವಿಶೇಷ ಅಧಿವೇಶನಕ್ಕೆ ಇದೀಗ ಇಡೀ ಸರ್ಕಾರವೇ ಬೆಳಗಾವಿಗೆ ಬಂದಿಳಿದಿದೆ. ಬೆಂಗಳೂರಿನಿಂದ ವಿಧಾನಮಂಡಲದ ಸರ್ವ ಕಚೇರಿಗಳು ಇದೀಗ ಸುವರ್ಣ ವಿಧಾನಸೌಧದಲ್ಲಿ ಪ್ರತಿಷ್ಠಾಪನೆಗೊಂಡಿವೆ. ಡಿಸೆಂಬರ್ ತಿಂಗಳ 30 ನೇ ತಾರೀಕಿನವರೆಗೆ ವಿಧಾನ ಮಂಡಲದ ವಿಶೇಷ ಅಧಿವೇಶನ ನಡೆಯುವ ಕಾರಣಕ್ಕೆ ಬೆಳಗಾವಿಗೆ ಇದೀಗ ವಿಶೇಷ ಮಹತ್ವ ಬಂದಿದೆ. ಇನ್ನೂ 15 ದಿನಗಳ ಕಾಲ ಮುಖ್ಯಮಂತ್ರಿಯಾದಿಯಾಗಿ ಸಚಿವರ ದಂಡೇ ಬೆಳಗಾವಿಯಲ್ಲಿ ಇರುವುದರಿಂದ ಎರಡನೇ ರಾಜಧಾನಿಯಾಗಿರುವ ಈ ಕುಂದಾನಗರಿ ನಾಡಿನ ಗಮನ ಸೆಳೆಯಲಿದೆ.

ಬೊಮ್ಮಾಯಿ ಸರಕಾರದ ಪಾಲಿಗೆ ಅತ್ಯಂತ ಮಹತ್ವದ ಅಧಿವೇಶನ ಆಗಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನಕ್ಕೆ ಎಲ್ಲಿಲ್ಲದ ಮಹತ್ವ ಬಂದಿದೆ. ಬೆಳಗಾವಿ ಅಧಿವೇಶನದಲ್ಲಿ ಬೊಮ್ಮಾಯಿ ಸರಕಾರ ಮಹತ್ವದ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ವಿಧಾನ ಪರಿಷತ್ ಸಭಾಪತಿ ಆಯ್ಕೆ ಸೇರಿದಂತೆ ಹಲವು ಬೆಳವಣಿಗೆಗಳಿಗೆ ಈ ಬಾರಿಯ ಅಧಿವೇಶನ ಸಾಕ್ಷಿ ಆಗುವ ಸಾಧ್ಯತೆಗಳಿವೆ.

ಒಟ್ಟಾರೆ, ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಇನ್ನು 15 ದಿನಗಳ ಕಾಲ ಇಡೀ ಸರ್ಕಾರವೇ ಬೆಳಗಾವಿಯಲ್ಲಿ ನೆಲೆಯಾಗಲಿದ್ದು ಕುಂದನಗರಿಗೆ ರಾಜ ಕಳೆ ಬಂದಿದೆ. ರಸ್ತೆಗಳು ಸಂಪೂರ್ಣ ಡಾಂಬರೀಕರಣ ಗೊಳ್ಳುವತ್ತ ಸಾಗಿದ್ದು ಕಂಡು ಬಂದಿದೆ. ಮಂತ್ರಿ- ಮಹೋದಯರು ಸಂಚರಿಸುವ ರಸ್ತೆಗಳು ಹೊಸ ರೂಪ ಪಡೆದುಕೊಂಡಿವೆ. ಸಚಿವರು, ಶಾಸಕರು ಉಳಿದುಕೊಳ್ಳುವ ತಾಣಗಳು ಇದೀಗ ಸುಣ್ಣ ಬಣ್ಣಗಳಿಂದ ಅಲಂಕೃತಗೊಂಡಿವೆ. ಒಟ್ಟಾರೆ ಬೆಳಗಾವಿ ಮಹಾನಗರ ಎರಡು ವಾರಗಳ ಕಾಲ ಅಧಿವೇಶನದ ನೆಪದಲ್ಲಿ ರಾಜ್ಯದ ಗಮನ ಸೆಳೆಯಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ