Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರಮಟ್ಟದ ಕಾರ್ಯಾಗಾರ ಯಶಸ್ವಿ

 

 

ಬೆಳಗಾವಿ :
ಇಂದಿನ ಯುವ ನ್ಯಾಯವಾದಿಗಳು ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆಯ ಕ್ಷೇತ್ರದಲ್ಲಿ ಇರುವ ಉಜ್ವಲ ಅವಕಾಶಗಳನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿಯ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಮತ್ತು ಪ್ರಾಚಾರ್ಯ ಡಾ. ಆನಂದ ದೇಶಪಾಂಡೆ ತಿಳಿಸಿದರು.

ಶುಕ್ರವಾರ ನಗರದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಸರ್ಕಾರದ ವಿಶ್ವೇಶ್ವರಯ್ಯ ವ್ಯಾಪಾರ ಅಭಿವೃದ್ದಿ ಉತ್ತೇಜನ ಕೇಂದ್ರಗಳ ವತಿಯಿಂದ ಶುಕ್ರವಾರ ನಗರದ ಲಿಂಗರಾಜ ಮಹಾವಿದ್ಯಾಲಯದ ಕೇಂದ್ರಸಭಾಗೃಹದಲ್ಲಿ ನಡೆದ
ಬೌದ್ಧಿಕ ಆಸ್ತಿ ಹಕ್ಕುಗಳು-ಸಾಧನಗಳು, ಸಂಶೋಧನೆ ಮತ್ತು ವ್ಯವಹಾರದಲ್ಲಿ ಅವುಗಳ ಮಹತ್ವ ಕುರಿತ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳು ಅತ್ಯಂತ ಮಹತ್ವ ಹೊಂದಿವೆ. ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ಮತ್ತು ಮಹತ್ವ ವಿವರಿಸಿದ ಅವರು ಕೃತಿಸ್ವಾಮ್ಯ, ವ್ಯಾಪಾರ ಗುರುತು , ಭೌಗೋಳಿಕ ಸೂಚ್ಯಂಕಗಳ ಹಾಗೂ ಇವುಗಳ ರಕ್ಷಣೆಯ ಮಹತ್ವ ವಿವರಿಸಿ ಇಂದಿನ ಯುವ ನ್ಯಾಯವಾದಿಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆಯ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು.



ಇಂದಿನ ದಿನಮಾನಗಳಲ್ಲಿ ನಮ್ಮಲ್ಲಿರುವ ಜ್ಞಾನ ಹಾಗೂ ಆವಿಷ್ಕಾರಗಳ ರಕ್ಷಣೆಯ ಕುರಿತು ತಿಳಿದುಕೊಂಡು ಮುನ್ನಡೆಯಬೇಕು. ಹೊಸ ಆವಿಷ್ಕಾರಗಳು ಸಮಾಜ ಹಾಗೂ ಪರಿಸರದ ರಕ್ಷಣೆಯನ್ನುಂಟು ಮಾಡುವ ಆವಿಷ್ಕಾರಗಳು ಆಗಿರಬೇಕು. ಆದರೆ ಅವು ಸಮಾಜಕ್ಕೆ ಮಾರಕವಾಗಿರಬಾರದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಬಿ. ಜಯಸಿಂಹ ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಆಸ್ತಿ ಹಕ್ಕು ಕಾರ್ಯಾಗಾರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಕರ್ನಾಟಕ ಸರ್ಕಾರದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಂಯೋಜಕಿ ಪ್ರಭಾವತಿ ರಾವ್, ಬೆಂಗಳೂರು ಅಲ್ಟಾಸಿಟ್ ಗ್ಲೋಬಲ್ ಮುಖ್ಯಸ್ಥೆ ಸೌಮ್ಯಶ್ರೀ ಮತ್ತು ಬೆಂಗಳೂರಿನ ಭೌಗೋಳಿಕ ಸೂಚ್ಯಂಕಗಳ ಪರಿಶೀಲನಾ ವಿಭಾಗದ ವಿಶೇಷ ತಜ್ಞೆ ನಂದಿನಿ ದೊಲೇಪತ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ತೇಜಸ್ವಿನಿ ವಾವರೆ ಪ್ರಾರ್ಥಿಸಿದರು. ಡಾ.ಜ್ಯೋತಿ ಜಿ.ಹಿರೇಮಠ ಸ್ವಾಗತ ಹಾಗೂ ಪರಿಚಯಿಸಿದರು. ತೇಜಸ್ವಿನಿ ಖಿಮಜಿ ನಿರೂಪಿಸಿದರು. ಡಾ.ಅಶ್ವಿನಿ ಹಿರೇಮಠ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ