Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಆತ್ಮೀಯ ಸನ್ಮಾನ

 

ಹಾವೇರಿ :
ಹಾವೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊರನಾಡಿನಲ್ಲಿ ಕನ್ನಡ ಸೇವೆ ಸಲ್ಲಿಸುತ್ತಿರುವ ಅನಿವಾಸಿ ಭಾರತೀಯ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಮೂಲತಃ ಕುಂದಾಪುರ ತಾಲೂಕಿನ ಬೈಂದೂರಿನವರು. ಪ್ರಾಥಮಿಕ ಶಿಕ್ಷಣದಿಂದ ಪದವಿಯವರೆಗೆ ಕರ್ನಾಟಕದಲ್ಲಿ ಪೂರ್ಣಗೊಳಿಸಿ ವೃತ್ತಿಯನ್ನು ಅರಸಿ ಕತಾರ್ ಗೆ 2007 ನೇ ಇಸವಿಯಲ್ಲಿ ಪಯಣ ಬೆಳೆಸಿದರು. ಕತಾರಿನಲ್ಲಿ ಯಶಸ್ವಿಯಾಗಿ ಹಲವಾರು ಕೆಲಸಗಳಲ್ಲಿ ತಮ್ಮ ನೈಪುಣ್ಯತೆಯನ್ನು ತೋರಿಸಿರುವರು.
ಹೊಸತರಲ್ಲಿ ಕೆಲಸ ಹಾಗೂ ಮನೆ ಎಂದು ಕಳೆದ ದಿನಗಳು ಕೆಲವು ಮಾತ್ರ ಕಾಲಕ್ರಮೇಣ ಕರ್ನಾಟಕ ಸಂಘ ಕತಾರ್ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಪರ ಒಳಿತಿಗಾಗಿ ಅಂಕಗಳನ್ನು ಹಾಕಲು ಪ್ರಾರಂಭಿಸಿದರು.

ಸಂಸ್ಥಾಪಕರ ಮಾರ್ಗದರ್ಶನ ಹಾಗೂ ಸಲಹೆ ಅವರ ಬೆಳವಣಿಗೆಗೆ ಪೂರಕವಾಯಿತು. ನಂತರದ ದಿನಗಳಲ್ಲಿ ಕರ್ನಾಟಕ ಸಂಘ ಕತಾರ್ ನ ಆಡಳಿತ ಸಮಿತಿಯ ಸದಸ್ಯರಾಗಿ ಉಪಾಧ್ಯಕ್ಷರಾಗಿ, ಸದಸ್ಯತ್ವ ಸಂಚಾಲಕರಾಗಿ, ಸಂಘ ಬೆಳೆಯಲು ಹಾಗೂ ಅದರ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವುದರ ಜೊತೆಗೆ ಸೇವೆ ಸಲ್ಲಿಸಿದರು.

ಪರಿಸರ ದಿನಾಚರಣೆಯಲ್ಲಿ ಸಸಿ ನೆಡುವುದು, ವಸಂತೋತ್ಸವ ದಲ್ಲಿ ವೇದಿಕೆ ಸಜ್ಜುಗೊಳಿಸುವುದು, ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರಾಯೋಜಕರನ್ನು ಪ್ರೇರೇಪಿಸುವುದು, ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವುದು, ನಾಟಕದಲ್ಲಿ ಪಾತ್ರ ವಹಿಸುವುದು ಹೀಗೆ ಅನೇಕಾನೇಕ ಸನ್ನಿವೇಶಗಳಲ್ಲಿ ವಿಭಿನ್ನ ಸಂದರ್ಭಗಳಲ್ಲಿ ಸುಬ್ರಹ್ಮಣ್ಯ ಅವರು ಯಾವ ಕೆಲಸ ಎಷ್ಟು ಪ್ರಮುಖ ಎಂದು ಆಲೋಚಿಸದೆ ಯಾವುದೇ ರೀತಿಯ ಪ್ರತಿಫಲಾಪೇಕ್ಷೆ ಇಲ್ಲದೆ ಮುನ್ನುಗ್ಗಿ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

ಇದೇ ಹುಮ್ಮಸ್ಸು ಹುರುಪು ಅವರ ನೇರ ನಡೆಯನ್ನು ಎತ್ತರದ ಶಿಖರಗಳ ಕಡೆಗೆ ಸಾಗಲು ಸಹಕರಿಸಿದ್ದು ರಾಜ್ಯಮಟ್ಟದ ರಾಷ್ಟ್ರಮಟ್ಟದಲ್ಲಿ ಐಸಿಬಿ ಎಫ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಇದರಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿತು. ಇವರ ಕಾರ್ಯಕ್ಷಮತೆಯನ್ನು ಭಾರತೀಯ ದೂತಾವಾಸದ ಕಾರ್ಯಾಲಯವು ಗಮನಿಸಿ ಶ್ಲಾಘಿಸಿತು ಪೂರ್ವ ರಾಯಭಾರಿಗಳಾಗಿ ಕುಮಾರ್ ಅವರು ಸುಬ್ರಹ್ಮಣ್ಯ ಅವರಿಗೆ ಅಭಿನಂದಿಸಿ ಪ್ರಮಾಣಪತ್ರವನ್ನು ಹಾಗೂ ನೆನಪಿನ ಕಾಣಿಕೆಯನ್ನು ನೀಡಿದ್ದಾರೆ.

ಅದೇ ಉನ್ನತಮಟ್ಟದ ಹೆಸರನ್ನು ಉಳಿಸಿಕೊಂಡು ಪ್ರಸ್ತುತ ಘನವೆತ್ತ ರಾಯಭಾರಿಗಳು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಹಲವಾರು ಬಾರಿ ಅಭಿನಂದಿಸಿದರು. ಈ ಅಭಿನಂದನೆಗಳ ಹಿಂದಿರುವ ಕಾರಣಗಳು ಹಲವಾರು. ಅದು ಹೇಳಲು ಅರ್ಹ. ಕೊರೊನಾ ಮಹಾಮಾರಿಯ ತಾಂಡವದ ಕಾಲದಲ್ಲಿ ಅಂದರೆ 2020- 21 ರಲ್ಲಿ ಎಲ್ಲರೂ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ದೈನಂದಿನ ಚಟುವಟಿಕೆಯಂತೆ ಮುಂಜಾನೆ ತಮ್ಮ ವಾಹನದಲ್ಲಿ ತರಕಾರಿ, ಊಟದ ಪೊಟ್ಟಣಗಳನ್ನು ತುಂಬಿಸಿಕೊಂಡು ಸುಮಾರು 200 ಜನರಿಗೆ ಅದನ್ನು ಹಂಚುತ್ತಿದ್ದರು. ಪ್ರತಿದಿನ ಸುಮಾರು ಸುಮಾರು ಮೂರರಿಂದ ನಾಲ್ಕು ತಿಂಗಳು ಮಾಡಿದ ನಿಸ್ವಾರ್ಥ ಸೇವೆ. ನಂತರ ಭಾರತ ವಿಶೇಷ ವಿಮಾನ ಸೇವೆಗೆ ನೂರಾರು ಭಾರತೀಯರನ್ನು ಮಾತೃಭೂಮಿಗೆ ಹಿಂದಿರುಗಲು ಸಹಾಯ ಮಾಡಿದರು. ರಾಜ್ಯ, ಹಿನ್ನೆಲೆ, ಭಾಷೆ ಯಾವುದನ್ನು ಪ್ರತ್ಯೇಕಿಸದೆ ಸಮಸ್ತ ಭಾರತೀಯರನ್ನು ಒಂದೇ ತಾಯಿಯ ಮಕ್ಕಳಂತೆ ಸಹೋದರ ಭಾವದಿಂದ ಸೇವೆ ಸಲ್ಲಿಸಿರುವರು.
ರಾಜ್ಯಮಟ್ಟಕ್ಕೆ ಬಂದಾಗ ಹೆಸರಾಂತ ಸಾಹಿತಿಗಳು ಕವಿಗಳು, ಚಲನಚಿತ್ರ ನಟರು, ನಟಿಯರು, ನಿರ್ದೇಶಕರು, ಕಲಾವಿದರು, ಪತ್ರಿಕೋದ್ಯಮಿಗಳು, ಚಿಂತಕರು ಕನ್ನಡದ ಪ್ರತಿಭೆಗಳನ್ನು ಸ್ವಾಗತಿಸಿ ಸನ್ಮಾನಿಸಲು ಕೊಡುಗೆ ಅಪಾರ.
ಕತಾರ್ ನಲ್ಲಿ ಕನ್ನಡ ಚಲನಚಿತ್ರಗಳ ಬಿಡುಗಡೆ ಮಾಡಲು ಇವರು ಬಹಳ ಕಷ್ಟಪಟ್ಟಿರುವವರು ಹಾಗೂ ಹಲವಾರು ಜಟಿಲ ಸಮಸ್ಯೆಗಳನ್ನು ಎದುರಿಸಬೇಕಾಯಿತು.

ಒಟ್ಟಿನಲ್ಲಿ ಕನ್ನಡಿಗರಿಗೆ ಮಾತ್ರವಲ್ಲದೆ ಭಾರತೀಯರೆಲ್ಲರಿಗೂ ಸ್ವಯಂಸೇವಕ ಸಮಾಜಪರ ಹೊಂದಿರುವ ಬಹುಮುಖ ಪ್ರತಿಭೆ ಸರಳ ವ್ಯಕ್ತಿತ್ವ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಬಹುಮುಖ ಕೊಡುಗೆಗಳನ್ನು ಮಾತ್ರ ಇಲ್ಲಿ ಉಲ್ಲೇಖಿಸಲಾಗಿದೆ. ದಿನಪತ್ರಿಕೆಗಳಲ್ಲಿ ಹಾಗೂ ವಿವಿಧ ಮಾಧ್ಯಮಗಳಲ್ಲಿ ಅವರ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳಲಾಗಿದೆ ಹಾಗೂ ಪ್ರಸಾರ ಪಡಿಸಲಾಗಿದೆ. ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಸನ್ಮಾನಿಸಲಾಗಿದೆ.

ಅವರ ಪರಿಶ್ರಮ ಹೀಗೆ ಮುಂದುವರಿಯಲಿ ಹಾಗೂ ಇನ್ನೂ ಉನ್ನತಮಟ್ಟದಲ್ಲಿ ಅವರ ಕೊಡುಗೆ ಶಿಖರದೆತ್ತರಕ್ಕೆ ತಲುಪಲಿ ಎಂಬ ಶುಭ ಹಾರೈಕೆಗಳು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ