Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಪಳಿಯಲ್ಲಿ ಮರಕ್ಕೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಸಿಂಧುದುರ್ಗ ಕಾಡಿನಲ್ಲಿ ಮಹಿಳೆ ಪತ್ತೆ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯವೊಂದರಲ್ಲಿ 50 ವರ್ಷದ ಮಹಿಳೆ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಮೆರಿಕ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸ ಇರುವ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಮಹಿಳೆ ಬಳಿ ಪತ್ತೆಯಾಗಿವೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಮುಂಬೈಯಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಯಿಯೊಬ್ಬ ಆಕೆ ಅಳುವುದನ್ನು ಕೇಳಿದ್ದಾನೆ. ಅಲ್ಲದೆ, ಆಕೆಯನ್ನು ಸರಪಳಿಯಲ್ಲಿ ಮರಕ್ಕೆ ಕಟ್ಟಿಹಾಕಿರುವುದು ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರನ್ನು ಎಚ್ಚರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆಯನ್ನು ಸಾವಂತವಾಡಿ (ರಾಜ್ಯದ ಕೊಂಕಣ ಪ್ರದೇಶದಲ್ಲಿ) ಮತ್ತು ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಆಕೆಯನ್ನು ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಎಂಬುದನ್ನು ನಾವು ಆಕೆಯ ಬಳಿ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳನ್ನು ಕಂಡುಕೊಂಡಿದ್ದೇವೆ ಎಂದು ಹೇಳಿದರು.
” ತಮಿಳುನಾಡು ವಿಳಾಸ ಇರುವ ಆಕೆಯ ಆಧಾರ್ ಕಾರ್ಡ್ ಮತ್ತು ಅಮೆರಿಕದ ಪಾಸ್‌ಪೋರ್ಟ್‌ನ ನಕಲು ಪ್ರತಿ ಆಕೆಯ ಬಳಿ ಪತ್ತೆಯಾಗಿದೆ. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದೆ. ಆಕೆಯ ವೀಸಾ ಅವಧಿ ಮುಗಿದಿದೆ. ಆಕೆಯ ರಾಷ್ಟ್ರೀಯತೆ ಯಾವುದು ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಈ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ” ಎಂದು ಅವರು ಹೇಳಿದರು.

ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.”ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ಕೆಲದಿನಗಳಿಂದ ಏನನ್ನೂ ತಿನ್ನದ ಕಾರಣ ಮಹಿಳೆ ದುರ್ಬಲಳಾಗಿದ್ದಾಳೆ ಹಾಗೂ ಈ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಎಷ್ಟು ದಿನದಿಂದ ಆಕೆ ಕಟ್ಟಿಹಾಕಿದ ಸ್ಥಿತಿಯಲ್ಲಿದ್ದಳು ಎಂಬುದು ಗೊತ್ತಿಲ್ಲ. ಆಕೆಯ ಪತಿ ತಮಿಳುನಾಡಿನಿಂದ ಬಂದು, ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿರಬಹುದು ಎಂದು ನಾವು ಭಾವಿಸಿದ್ದೇವೆ ಎಂದು ಹೇಳಿದ್ದಾರೆ. ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ