Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಡಳಿತ ಚತುರ ಎನ್. ಜಯರಾಂಗೆ ನಾಲ್ಕು ಹುದ್ದೆ; ಗುಣಕ್ಕೆ ಸಂದ ಗೌರವ

ಜನ ಜೀವಾಳ  ಜಾಲ: ಬೆಳಗಾವಿ:ಆಡಳಿತ ಒಂದು ಕಲೆ, ಜನರ ಮೇಲೆ ಆಡಳಿತ ನಡೆಸುವುದು ಸ್ವಸ್ಥ ಸಮಾಜ ಮುನ್ನಡೆಸಲು ಎನ್ನುವುದು ದಿಟ. ದಕ್ಷ ಹಾಗೂ ಜನಾನುರಾಗಿ ಆಡಳಿತ ನಡೆಸಿದ ಕಾರಣಕ್ಕೆ ಒಬ್ಬ ಐಎಎಸ್ ಅಧಿಕಾರಿಗೆ ನಾಲ್ಕು ಹೊಸ ಹುದ್ದೆ ಒಲಿದು ಬಂದಿದೆ.

ಹಿರಿಯ ಐಎಎಸ್ ಅಧಿಕಾರಿ ಕಾರ್ಯದರ್ಶಿ ಶ್ರೇಣಿಯಲ್ಲಿರುವ ಎನ್. ಜಯರಾಮ ಅವರಿಗೆ ಮುಖ್ಯಮಂತ್ರಿ ಕಾರ್ಯದರ್ಶಿ, ಕಂದಾಯ ಕಾರ್ಯದರ್ಶಿ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಕಾರ್ಯದರ್ಶಿ ಹಾಗೂ ಬೆಂಗಳೂರು ಜಲಮಂಡಳಿ ಚೇರಮನ್ ಹುದ್ದೆ ನಿಭಾಯಿಸುವ ಮಹತ್ತರ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರ ಸರಕಾರ ನೀಡಿ ಗಮನ ಸೆಳೆದಿದೆ.
ಹಿಂದಿನ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರಾಜ್ಯದ ಅತಿದೊಡ್ಡ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನಾಲ್ಕೂವರೆ ವರ್ಷ ಸೇವೆ ಸಲ್ಲಿಸಿದ್ದರು ಎನ್. ಜಯರಾಮ.
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ, ಜಿಲ್ಲಾಧಿಕಾರಿ ಆಗಿ ಜನಾನುರಾಗಿ ಹಾಗೂ ದಕ್ಷ ಆಡಳಿತಗಾರನಾಗಿ ಜಯರಾಮ ಹೆಸರು ಗಳಿಸಿದ್ದರು. ಇಲ್ಲಿಂದ ವರ್ಗವಾಗಿ ಬೆಂಗಳೂರಿಗೆ ಹೋದಾಗಲು ಉತ್ತಮವಾದ ಹುದ್ದೆಗಳನ್ನೇ ಸರಕಾರ ಅವರಿಗೆ ನೀಡಿತ್ತು. ಪ್ರಸ್ತುತ ಸರಕಾರ ಅವರಿಗೆ ಮಹತ್ತರ ಹುದ್ದೆಗಳಲ್ಲಿ ಪೂರ್ಣ ಮತ್ತು ಹೆಚ್ಚುವರಿ ಜವಾಬ್ದಾರಿಯಲ್ಲಿ ನಾಲ್ಕು ಹುದ್ದೆಗಳನ್ನು ನೀಡಿದೆ. ಮುಖ್ಯಮಂತ್ರಿ ಕಾರ್ಯದರ್ಶಿಗೆ ಜಯರಾಮ ನೇಮಕವಾಗುತ್ತಿದ್ದಂತೆ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಹರ್ಷೋದ್ಘಾರ ಉಂಟಾಗಿದೆ.
ಸಮಸ್ತ ಬೆಳಗಾವಿ ಪತ್ರಕರ್ತರು ಹಾಗೂ ಬೆಳಗಾವಿ ವಾರ್ತಾ ಇಲಾಖೆಯ ಪರವಾಗಿ 'ಜನಜೀವಾಳ' ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ