Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಕ್ತ ಕನಕದಾಸರ ವಿಚಾರಧಾರೆ ಅಳವಡಿಸಿಕೊಳ್ಳಿ : ಲಕ್ಷ್ಮಣ ಸವದಿ

 

ಅಥಣಿ :
ದಾಸ ಶ್ರೇಷ್ಠ ಕನಕದಾಸರು ವಿಶ್ವದ ಶ್ರೇಷ್ಠ ಸಂತರು. ಜೀವನದಲ್ಲಿ ಅವರ ತತ್ವ ಸಂದೇಶ ಅಳವಡಿಸಿಕೊಂಡರೆ ನೆಮ್ಮದಿಯುತ, ಸಾರ್ಥಕ ಬದುಕು ನಮ್ಮದಾಗಲು ಸಾಧ್ಯ ಎಂದು ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಶ್ರೀ ದಡ್ಡಿ ಮುತ್ಯಾ ದೇವಸ್ಥಾನದ ಮುಂಭಾಗದಲ್ಲಿ ತಾಲೂಕು ಹಾಲುಮತ ಕುರುಬರ ಸಂಘ ಇವರ ಆಶ್ರಯದಲ್ಲಿ ಗುರುವಾರ ನಡೆದ ದಾಸ ಶ್ರೇಷ್ಠ ಭಕ್ತ ಕನಕದಾಸರ 536ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ದಾಸ ಶ್ರೇಷ್ಠ ಕನಕದಾಸರ ತತ್ವ, ಸಂದೇಶಗಳು, ಅವರ ವಿಚಾರಧಾರೆಗಳು ಉತ್ತಮ ಹಾಗೂ ಮೌಲ್ಯಯುತವಾಗಿವೆ. ಇವುಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಾಗಬೇಕು. ಇದರಿಂದ ನಮ್ಮ ಜೀವನ ಆದರ್ಶಮಯವಾಗಬಲ್ಲದು. ಇಂತಹ ಮಹಾನ್ ಸಂತರು, ಶರಣರು, ಮಹಾತ್ಮರು ಯಾವುದೇ ಒಂದೇ ಜಾತಿಗೆ ಸೀಮಿತರಾದ ವ್ಯಕ್ತಿಗಳಲ್ಲ. ಎಲ್ಲ ಸಮಾಜದವರು ಇಂತವರ ಸ್ಮರಣೆ, ಜಯಂತಿ ಆಚರಣೆ, ಉತ್ಸವಗಳನ್ನು ಒಟ್ಟಾಗಿ ಆಚರಿಸಬೇಕು. ಇದರಿಂದ ಸಮಾಜದಲ್ಲಿ ಒಗ್ಗಟ್ಟಿನ ಸಂದೇಶ ಮೂಡುತ್ತದೆ ಎಂದು ಹೇಳಿದರು.

ಹಾಲುಮತ ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣ ಎನ್ನುವುದು ಕೇವಲ ನೌಕರಿಗಾಗಿ ಮಾತ್ರವಲ್ಲ, ಮನುಷ್ಯನ ಜ್ಞಾನಾರ್ಜನೆಗೆ, ಉತ್ತಮ, ಸಂಸ್ಕಾರಯುತ ಬದುಕು ಸಾಗಿಸಲು ಪ್ರತಿಯೊಬ್ಬರಿಗೂ ಶಿಕ್ಷಣದ ಅಗತ್ಯವಿದೆ. ಆದ್ದರಿಂದ ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಲುಮತ ಸಮಾಜ ಬಾಂಧವರು ಸಂಪೂರ್ಣವಾಗಿ ನನ್ನನ್ನು ಬೆಂಬಲಿಸಿದ್ದರಿಂದ ಅತ್ಯಧಿಕ ಮತಗಳ ಅಂತರದ ಗೆಲವು ಪಡೆಯಲು ಸಾಧ್ಯವಾಗಿದೆ. ನಿಮ್ಮೆಲ್ಲರ ಋಣ ನನ್ನ ಮೇಲೆ ಬಹಳಷ್ಟಿದೆ. ಹಾಲುಮತ ಸಮಾಜದವರ ಪ್ರೀತಿ ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ ಎಂದು ತಿಳಿಸಿದರು.

ಅಥಣಿ ತಾಲೂಕಿನ ಹಾಲುಮತ ಸಮಾಜ ಬಾಂಧವರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕಾಗವಾಡ ಶಾಸಕ ರಾಜು (ಭರಮಗೌಡ) ಕಾಗೆ, ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ ಮಾತನಾಡಿದರು. ಸುರೇಶ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ರಾವಸಾಬ ಬೆವನೂರ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡರಾದ ಸದಾಶಿವ ಬುಟಾಳಿ, ಗಜಾನನ ಮಂಗಸೂಳಿ, ರಾವಸಾಬ ಐಹೊಳೆ, ಸುರೇಶ ಮಾಯಣ್ಣವರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ತಾ.ಪಂ. ಇ.ಒ. ಶಿವಾನಂದ ಕಲ್ಲಾಪುರ, ಪಿಡಬ್ಲುಡಿ ಎ.ಇ.ಇ. ವೀರಣ್ಣ ವಾಲಿ, ಅಬಕಾರಿ ಸಿ.ಪಿ.ಐ. ಮಹಾಂತೇಶ ಬಂಡಗರ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು. ವಿವಿಧ ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು, ಹಾಲುಮತ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಸಾರಿಗೆ ಸಂಸ್ಥೆ :
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಥಣಿ ಘಟಕದಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತಿಯಲ್ಲಿ ಶಾಸಕ ಲಕ್ಷ್ಮಣ ಸವದಿ ಪಾಲ್ಗೊಂಡು ಕನದಾಸರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಮನ ಸಲ್ಲಿಸಿದರು. ಕನಕದಾಸರ ಜಯಂತಿ ನಿಮಿತ್ತ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಲಕ್ಷ್ಮಣ ಸವದಿ ಮಾಲಾರ್ಪಣೆ ಮಾಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ