Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವು

Advertisement

ಬೆಳಗಾವಿ: ಸಮಾಜಸೇವೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಯತ್ನ ಸಂಸ್ಥೆ ವತಿಯಿಂದ ಶನಿವಾರ ಬೆಳಗಾವಿ ತಾಲೂಕಿನ ಬಿ.ಕೆ. ಕಂಗ್ರಾಳಿ ಗ್ರಾಮದ ಸಮೃದ್ಧ ಫೌಂಡೇಶನ್ ಮಕ್ಕಳ ಅನಾಥಾಶ್ರಮಕ್ಕೆ ಭೇಟಿ ನೀಡಿ ವಿವಿಧ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅನಾಥಾಶ್ರಮದ ಮಕ್ಕಳಿಗೆ ಶಾಲಾ ಪುಸ್ತಕಗಳು, ನೋಟ್‌ಬುಕ್‌ಗಳು, ಲೇಖನ ಸಾಮಗ್ರಿಗಳು, ದಿನಸಿ ಸಾಮಗ್ರಿಗಳು, ಬಿಸ್ಕತ್ ಹಾಗೂ ವಿವಿಧ ತಿಂಡಿಗಳನ್ನು ವಿತರಿಸಿ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯಲಾಯಿತು.

ಶಾಲಾ ಪುಸ್ತಕಗಳನ್ನು ಉದಾರವಾಗಿ ಕೊಡುಗೆಯಾಗಿ ನೀಡಿದ ಸಂಸ್ಥೆಯ ಸದಸ್ಯೆ ಅರುಣಾ ಚೌಧರಿ ಅವರ ಸೇವಾ ಮನೋಭಾವವನ್ನು ಸಂಸ್ಥೆಯು ವಿಶೇಷವಾಗಿ ಶ್ಲಾಘಿಸಿತು. ಅವರ ಕೊಡುಗೆಯು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರ ಭವಿಷ್ಯದ ಕನಸುಗಳಿಗೆ ಹೊಸ ಚೈತನ್ಯ ತುಂಬಲಿದೆ ಎಂದು ಅಧ್ಯಕ್ಷೆ ಶಾಂತಾ ಆಚಾರ್ಯ ತಿಳಿಸಿದರು.
ಈ ಸೇವಾ ಕಾರ್ಯ ಯಶಸ್ವಿಯಾಗಲು ಸಹಕರಿಸಿದ ಸಂಸ್ಥೆಯ ಎಲ್ಲ ಸದಸ್ಯರು ಹಾಗೂ ಹಿತೈಷಿಗಳಿಗೆ ಪ್ರಯತ್ನ ಸಂಸ್ಥೆ ಕೃತಜ್ಞತೆ ಸಲ್ಲಿಸಿದೆ. ಸಮಾಜದ ಸಹಕಾರದಿಂದ ಇಂತಹ ಸೇವಾ ಚಟುವಟಿಕೆಗಳನ್ನು ಮುಂದುವರಿಸಿ, ಅಗತ್ಯವಿರುವ ಮಕ್ಕಳ ಬದುಕಿನಲ್ಲಿ ಸಂತೋಷ, ಆಶಾಭಾವನೆ ಮತ್ತು ಆತ್ಮವಿಶ್ವಾಸ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಪ್ರಯತ್ನ ಸಂಘಟನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವುಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆಶಾಲೆಗಳಲ್ಲಿ ಶನಿವಾರದ ಶಾಲಾ ವೇಳಾಪಟ್ಟಿ ಬದಲಾಯಿಸಲು ಸರ್ಕಾರ ಸಮ್ಮತಿ ?ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ಕೇಂದ್ರದಿಂದ ಗುಡ್‌ನ್ಯೂಸ್ ; ವಾಣಿಜ್ಯ ಬಳಕೆ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಸರ್ಕಾರ ; ಪೂರೈಕೆ ಸಹಜ ಸ್ಥಿತಿಗೆಇಡಿ ದಾಳಿ ವೇಳೆ ಮಂಜುನಾಥ ಮತ್ತು ಆಪ್ತರ ಬಳಿ ಸಿಕ್ಕಿದ್ದೆಷ್ಟು ಗೊತ್ತೇ ?ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆ