Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಬೆಂಗಳೂರು :
ಅಮರನಾಥದಲ್ಲಿ ಸಿಲುಕಿದ್ದ ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಮರನಾಥ್ ನಲ್ಲಿ ಸಿಲುಕಿರುವ ಕರ್ನಾಟಕದ ಯಾತ್ರಾರ್ಥಿಗಳ ರಕ್ಷಣೆಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿಯವರನ್ನು ನೇಮಿಸಲಾಗಿದೆ. ಮಳೆಯಾಗುತ್ತಿರುವುದರಿಂದ ಅವರನ್ನು ಹೆಲಿಕಾಪ್ಟರ್ ಅಥವಾ ವಿಮಾನದ ಮೂಲಕ ರಕ್ಷಿಸಲಾಗುತ್ತಿಲ್ಲ. ನಮ್ಮ ಅಧಿಕಾರಿಗಳು ಅಲ್ಲಿನ ಪ್ರಾದೇಶಿಕ ಆಯುಕ್ತರು ಹಾಗೂ ಡಿಸಿ, ಮತ್ತು ಪೊಲೀಸರೊಂದಿಗೆ ಮಾತನಾಡಿದ್ದಾರೆ. ಮಳೆ ಕಡಿಮೆಯಾದ ನಂತರ ರಕ್ಷಣಾ ಕಾರ್ಯ ನಡೆಸಲಾಗುತ್ತದೆ ಎಂದರು.

*ಅರಣ್ಯ ಬೆಳೆಸಲು ಸರ್ಕಾದ ಜೊತೆ ಜನರು ಕೈಜೋಡಿಸಬೇಕು*

ಅರಣ್ಯ ಬೆಳೆಸುವುದು ಸರ್ಕಾರದ ಹಾಗೂ ಜನರ ಕರ್ತವ್ಯ. ವೈಜ್ಞಾನಿಕವಾಗಿ ಅಗತ್ಯವಿರುವಷ್ಟು ಅರಣ್ಯ ಪ್ರದೇಶ ನಮ್ಮಲ್ಲಿ ಇಲ್ಲ. ಪ್ರತಿ ವರ್ಷ ಸಸಿ ನೆಡಲು ಹಣ ಖರ್ಚು ಮಾಡಿದರೂ ನಮಗೆ ಅಗತ್ಯವಿರುವಷ್ಟು ಅರಣ್ಯವಿಲ್ಲ. ಕಾಡು ಬೆಳೆಸುವ ಭಾವನೆ ಜನರಲ್ಲಿಯೂ ಮೂಡಿ ಸರ್ಕಾರದ ಜೊತೆಗೆ ಸಹಕರಿಸಬೇಕು ಎಂದರು.

ಈ ವರ್ಷ 5 ಕೋಟಿ ಗಿಡ ನೀಡಬೇಕೆಂಬ ಉದ್ದೇಶವಿದೆ. ಐದು ಕೋಟಿ ಸಸಿಗಳೂ ಬದುಕುವುದಿಲ್ಲ. ಶೇ 50 ಕ್ಕಿಂತಲೂ ಕಡಿಮೆ ಗಿಡಗಳು ಬದುಕುಳಿಯುತ್ತವೆ. ಹಾಗಾಗಿ ನಿರೀಕ್ಷಿತ ಪ್ರಮಾಣದಲ್ಲಿ ಕಾಡು ಬೆಳೆದಿಲ್ಲ ಎಂದರು.

*ತೆಂಗಿನ ಸಸಿ ನೆಟ್ಟ ಸಿಎಂ*

ಸ್ವಾಭಿಮಾನಿ ಪಾರ್ಕ್ ಹಾಗೂ ವನಮಹೋತ್ಸವ ಉದ್ಘಾಟಿಸಿದ್ದು,
ತೆಂಗಿನ ಸಸಿಯನ್ನು ನೆಟ್ಟಿರುವುದಾಗಿ ತಿಳಿಸಿದರು. ಹಿಂದೆಯೂ ಒಂದು ಗಿಡ ನೆಟ್ಟಿದ್ದು ಅದು ಚೆನ್ನಾಗಿ ಬೆಳೆದಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ