Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿಮ್ನ ವರ್ಗಗಳ ಉದ್ದಾರಕ ಅಂಬೇಡ್ಕರ್ : ಆರ್.ಎಸ್.ಪಾಟೀಲ

ಬೆಳಗಾವಿ : ಡಾ.ಬಿ.ಆರ್. ಅಂಬೇಡ್ಕರ್ ಅವರು ನಿಮ್ನ ವರ್ಗಗಳ ಶೋಷಣೆ, ಅಸಮಾನತೆ ಹೋಗಲಾಡಿಸಲು ಜೀವನವಿಡೀ ಪ್ರಯತ್ನಿಸಿದ್ದರು. ಸಮಾಜದ ಈ ಕೆಳ ವರ್ಗಗಳ ಸರ್ವಾಂಗಿಣ ಅಭಿವೃದ್ಧಿಗೆ ಅವರ ಕಳಕಳಿ ಗಮನಾರ್ಹವಾದ ಎಂದು ಬೆಳಗಾವಿ ಜಿಎ ಸಂಯುಕ್ತ ಪದವಿಪೂರ್ವ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್. ಎಸ್. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಎ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರವಿವಾರ ನಡೆದ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ಶೋಷಿತ ಸಮುದಾಯದ ಜೊತೆ ಕೆಳ ವರ್ಗದ ಎಲ್ಲಾ ಸಮಾಜಗಳನ್ನು ಮುಂದೆ ತರಲು ಜೀವನವಿಡಿ ಶ್ರಮಿಸಿದ್ದರು. ಅವರ ಕಳಕಳಿ ಅನುಕರಣೀಯ ಎನಿಸಿದೆ. ಇಂದು ಎಲ್ಲಾ ಸಮಾಜದಲ್ಲಿ ಆಗಿರುವ ಬದಲಾವಣೆಗಳಿಗೆ ಅಂಬೇಡ್ಕರ್ ಅವರೇ ಕಾರಣರಾಗಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್ ಅವರ ಹೋರಾಟಗಳಿಗೆ ಅತ್ಯಂತ ದೊಡ್ಡ ಇತಿಹಾಸ ಇದೆ. ಅಂದಿನ ರಾಜಕೀಯ ನಾಯಕರು ಸಹಾ ಅಂಬೇಡ್ಕರ್ ವಿಚಾರಗಳನ್ನು ಒಪ್ಪಿಕೊಂಡಿದ್ದರು. ಇಂದು ಕಾಣುತ್ತಿರುವ ಈ ಸಮಾಜದ ಬದಲಾವಣೆಗಳಿಗೆ ಅಂಬೇಡ್ಕರ್ ಮುಖ್ಯ ಕಾರಣರು ಎಂದು ಹೇಳಿದರು.

ನಮ್ಮಲ್ಲಿರುವ ಮಾನಸಿಕ ಕೀಳರಿಮೆ ತೆಗೆಯಲು ಪ್ರಯತ್ನಿಸಬೇಕು. ನಾನು ಕೆಳವರ್ಗದವನು. ನನ್ನಂದ ಏನು ಸಾಧ್ಯವಿಲ್ಲ ಎಂಬ ಕೀಳರಿಮೆಯಿಂದ ನಾವು ಹೊರ ಬರಬೇಕು. ಈ ಮೂಲಕ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡರೆ ದೇಶ ಇನ್ನಷ್ಟು ಪ್ರಬಲವಾಗಿ ಬೆಳೆಯಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪ ಪ್ರಾಚಾರ್ಯ ಸಿದ್ದರಾಮ ಗದಗ, ಆಜೀವ ಸದಸ್ಯ ಮಹಾದೇವ ಬಳಿಗಾರ ಉಪಸ್ಥಿತರಿದ್ದರು.

ಕಾವೇರಿ ಪಟ್ಟಣ ಅಂಬೇಡ್ಕರ್ ಕುರಿತು ಮಾತನಾಡಿದರು.
ಆರ್.ಎಂ.ಮಗದುಮ ನಿರೂಪಿಸಿದರು. ಸಿ.ಪಿ.ದೇವರುಷಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ