Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ: ಭರ್ಜರಿ ಗೆಲುವಿನತ್ತ ಟಿಡಿಪಿ

ಅಮರಾವತಿ : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತಗಳ ಎಣಿಕೆ ಪ್ರಗತಿಯಲ್ಲಿದೆ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಪ್ರಚಂಡ ವಿಜಯದತ್ತ ಸಾಗುತ್ತಿದೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಲ್ಲಿ 893 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರೆ, ಜೆಎಸ್‌ಪಿ ಮುಖ್ಯಸ್ಥ ಪವನ ಕಲ್ಯಾಣ ಪಿಠಾಪುರಂ ವಿಧಾನಸಭೆಯಿಂದ 7,997 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಒಟ್ಟು 175 ಸ್ಥಾನಗಳಲ್ಲಿ ಎನ್‌ಡಿಎ ೧೩೭ ಸ್ಥಾನಗಳಲ್ಲಿ ( ಟಿಡಿಪಿ 116 ಸ್ಥಾನಗಳಲ್ಲಿ, ಜನಸೇನಾ ಪಾರ್ಟಿ 15 ಹಾಗೂ ಬಿಜೆಪಿ 6) ಮುಂದಿದೆ. ಮುಖ್ಯಮಂತ್ರಿ ಜಗ್ನಮೋಹ ರೆಡ್ಡಿಯ ವೈಎಸ್‌ಆರ್‌ಸಿಪಿ ಪಕ್ಷವು 22 ಸ್ಥಾನಗಳಲ್ಲಿ ಮಾತ್ರ ಮುಂದಿದೆ.

ಆಂಧ್ರ ಪ್ರದೇಶ ವಿಧಾನಸಭೆಯು 175 ಸ್ಥಾನಗಳನ್ನು ಹೊಂದಿದೆ ಮತ್ತು ಬಹುಮತ ಪಡೆದು ಸರ್ಕಾರ ರಚಿಸಲು 88 ಸ್ಥಾನಗಳು ಬೇಕು.
2019 ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾದರು. ಅಧಿಕಾರದಲ್ಲಿರುವ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಜೆಎಸ್‌ಪಿ ಒಂದೇ ಒಂದು ಸ್ಥಾನವನ್ನು ಗೆದ್ದಿತ್ತು, ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. 2014 ರ ಆಂಧ್ರಪ್ರದೇಶ ಚುನಾವಣೆಯಲ್ಲಿ, ಟಿಡಿಪಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು ಮತ್ತು ಒಟ್ಟಿಗೆ ಅವರು 106 ಸ್ಥಾನಗಳನ್ನು (ಟಿಡಿಪಿ 102 ಮತ್ತು ಬಿಜೆಪಿ 4) ಗೆದ್ದಿತ್ತು. ಮತ್ತು ವೈಎಸ್‌ಆರ್‌ಸಿಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ