ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ ಮತ್ತು ರಿಯಾಯಿತಿ ದರದ ಬಸ್ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಜೂನ್ 12ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.
ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್ಗಳ ಸಂಪೂರ್ಣ ಶುಲ್ಕವನ್ನು ಅರ್ಜಿ ಸಲ್ಲಿಸಿದ 7 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಲ್ಕ ಪಾವತಿಸಿ ಬಸ್ ಪಾಸ್ಗಳನ್ನು ಪಡೆದಿರುವ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗಾಗಿ ಸರ್ಕಾರದ ಸೇವಾಸಿಂಧು ಪೋರ್ಟಲ್ನ https: //sevasindhuservices.karnataka.gov.in /buspassservices ಸಂಖ್ಯೆ ಹಾಗೂ ಓಟಿಪಿ ನಮೂದಿಸಿ, ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಿರಬೇಕು ಹಾಗೂ ತಮ್ಮ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು. 7 ದಿನಗಳ ಒಳಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಎನ್ಇಎಫ್ಟಿ ಅಥವಾ ಆಟಿಟಿಜಿಎಸ್ ಮೂಲಕ ಪಾಸ್ ಮೊತ್ತ ಮರುಪಾವತಿಯಾಗುವುದು.
ಮರುಪಾವತಿಯಾಗಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ರವಾನಿಸಲಾಗುವುದು. ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್ಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.