Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್‌ಗೆ ಅರ್ಜಿ ಆಹ್ವಾನ

ಬೆಂಗಳೂರು :ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್‌ ನೀಡಲಾಗುವುದು. ಫೆಲೋಷಿಪ್‌ ಅವಧಿ 6 ತಿಂಗಳು.
ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.

*ಫೆಲೋಷಿಪ್‌ನ ವಿಷಯಗಳು ಈ ಕೆಳಗಿನಂತಿವೆ*

1. ಬಾಲ್ಯವಿವಾಹ, POCSO, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ

2. ಕೃಷಿ ಸಂವಹನ- ಒಂದು ಅಧ್ಯಯನ

3. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ

4. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ

5. Role of Media in creating awareness on cybercrime and digital safety (ಇಂಗ್ಲಿಷ್‌ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು)

6. ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ

ಫೆಲೋಷಿಪ್‌ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು 2 ನೇ ಆಗಸ್ಟ್‌ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ