Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪ್ಪು ಒಬ್ಬ ಅಪರೂಪದ ನಟ, ಸಮಾಜ ಸೇವಕ - ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

 

ಬೆಳಗಾವಿ :
ದಿವಂಗತ ಪುನೀತ್ ರಾಜಕುಮಾರ್ ಅವರು ಒಬ್ಬ ಅಪರೂಪದ ನಟ ಮತ್ತು ಅಪರೂಪದ
ಸಮಾಜ ಸೇವಕ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಹೇಳಿದರು.

ಅಪ್ಪು ಜನ್ಮದಿನೋತ್ಸವ ಸಮಾರಂಭದಲ್ಲಿ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಗರದ ಸಿ.ಪಿ.ಇ.ಡಿ ಗ್ರೌಂಡ್ ನಲ್ಲಿ ಅಪ್ಪು ಅಭಿಮಾನಿ ಬಳಗ ಅಯೋಜಿಸಿದ್ದ ಅಪ್ಪು
ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಕೇಕ್ ಕಟ್ ಮಾಡುವ ಮೂಲಕ ಚಾಲನೆ ಮಾಡಲಾಯಿತು.

ಪರ್ಯಾಯ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬೆಳಗಾವಿ ಗ್ರಾಮೀಣ
ಕ್ಷೇತ್ರದ ವಿಧಾನಸಭಾ ಸದಸ್ಯೆ ಲಕ್ಷ್ಮೀ ಹೆಬ್ಬಾಳಕರ್ ಬಿಡುಗಡೆಗೊಳಿಸಿ ಮಾತನಾಡಿದ
ಅವರು
ಪುನೀತ್ ರಾಜಕುಮಾರ್ ಅವರ ಸರಳತೆ ಅದರ್ಶ ಹಾಗೂ ಅವರ ಕುಟುಂಬದೊಂದಿಗೆ ಇದ್ದ ಬಾಂಧವ್ಯದ
ಕುರಿತು ಮಾಹಿತಿ ನೀಡಿದರು. ಪರ್ಯಾಯ ಚಿತ್ರ ತಂಡಕ್ಕೆ ಶುಭ ಹಾರೈಸಿದ ಅವರು ಈ
ಚಿತ್ರವು ಉತ್ತಮ ಸಂದೇಶದೊಂದಿಗೆ ಮೂಡಿ ಬರಲಿ ಎಂದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀ ಶಂಕರಲಿಂಗ ಗುರುಪೀಠದ ಶ್ರೀ ಸೋಮಲಿಂಗ
ಮಹಾಸ್ವಾಮಿಗಳು ಮಾತನಾಡಿ ಪುನೀತ್ ರಾಜಕುಮಾರ್ ಅವರ ಪರೋಪಕಾರ ಗುಣ ಅನುಕರಣೀಯ ಎಂದರು,
ನಾವು ಮಾಡುವ ಕಾಯಕವನ್ನು ಶ್ರದ್ಧೆಯಿಂದ ಮಾಡಬೇಕು ಎಂದ ಅವರು ಯುವಜನರು ಉತ್ತಮ ಆಚಾರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. ಪರ್ಯಾಯ ಚಲನಚಿತ್ರ ಸದಭಿರುಚಿಯ ಚಿತ್ರವಾಗಿ ಜನಮನ್ನಣೆ ಗಳಿಸಲಿ ಎಂದರು.
ಚಲನಚಿತ್ರ ನಿರ್ದೇಶಕ ರಮಾನಂದ ಮಿತ್ರ, ಮಮತ ಕ್ರಿಯೇಷನ್ ನ ರಾಜಕುಮಾರ್ ಮತ್ತು ಮುರುಗೇಶ್ ಶಿವಪೂಜಿ ಚಿತ್ರೀಕರಣ ಸಂದರ್ಭದ ಅನುಭವಗಳನ್ನು ಹಂಚಿಕೊಂಡರು.
ಸ್ಥಳೀಯ ಕಲಾವಿದರಾದ ಶಾಂತಾ ಆಚಾರ್ಯ, ವಿಶ್ವನಾಥ ದೇಸಾಯಿ ಮತ್ತು ಅವರ
ತಂಡದವರು ಮತ್ತಿತರ ಪುನೀತ್ ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರ ಚಲನಚಿತ್ರಗಳ ಗೀತೆಗಳನ್ನು ಹಾಡಿ ಪ್ರೇಕ್ಷಕರ ಮನರಂಜಿಸಿದರು. ರಂಜನ್ ರಾಜ್, ಶಿವಾನಂದ ಚಿಕ್ಕಮಠ , ಮತ್ತಿತರರು ಉಪಸ್ಥಿತರಿದ್ದರು. ಸುನೀತಾ ದೇಸಾಯಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ