Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ಬಗ್ಗೆ ಗೌರವ ಮೂಡಲು ಭಗವದ್ಗೀತೆ ಕಾರಣ - ಅರವಿಂದರಾವ್ ದೇಶಪಾಂಡೆ

ಅಥಣಿ : ಭಾರತದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಮೂಡಲು ಭಗವದ್ಗೀತೆ ಕಾರಣ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತೀಯ ಸಹಸಂಘ ಚಾಲಕ ಅರವಿಂದ ರಾವ್ ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ.
ಸೋಂದಾ ಸ್ವರ್ಣವಲ್ಲಿ ಮಠದಿಂದ ನಡೆಸಲಾಗುತ್ತಿರುವ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಅಥಣಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಗವದ್ಗೀತೆ ಶ್ಲೋಕದಲ್ಲಿ ವಿಜ್ಞಾನವೂ ಇದೆ, ಮ್ಯಾನೇಜ್ ಮೆಂಟ್ ಕೂಡ ಇದೆ. ಜಾಗತಿಕವಾಗಿ ಭಗವದ್ಗೀತೆಯನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ, ಅದು ಸರ್ವಮಾನ್ಯವಾದದ್ದು. ಪ್ರಧಾನಿಗಳು ಯಾವುದೇ ದೇಶಕ್ಕೆ ಹೋದರೂ ಭಗವದ್ಗೀತೆ ಕೊಡುತ್ತಾರೆ. ಇಂದು ಅಮೇರಿಕಾದಲ್ಲಿ ವಿದ್ಯಾರ್ಥಿಗಳು ಭಗವದ್ಗೀತೆ ಕಂಠ ಪಾಠ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಭಗವದ್ಗೀತೆ ಕೇಳಲು ನಾವು ಅಮೇರಿಕಾಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದೀತು ಎಂದು ಅವರು ಎಚ್ಚರಿಸಿದರು.

ಭಗವದ್ಗೀತೆ ರಾಜ್ಯಮಟ್ಟದ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ ಅಭಿಯಾನದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಪ್ರತಿ ತಾಲೂಕಿನಲ್ಲೂ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ಭಗವದ್ಗೀತೆ ಅಭಿಯಾನ ನಡೆಯಲಿದೆ. ಅದಕ್ಕೂ ಪೂರ್ವ ಪ್ರಶಿಕ್ಷಣ ನಡೆಸಲಾಗುವುದು. ಎಲ್ಲ ತಾಲೂಕುಗಳಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯ ಸಮಿತಿಯ ಕಾರ್ಯದರ್ಶಿ ಎಂ.ಕೆ.ಹೆಗಡೆ, ಅಥಣಿ ತಾಲೂಕು ಸಮಿತಿ ಅಧ್ಯಕ್ಷ ಸುಹಾಸ ದಾತಾರ, ಉಪಾಧ್ಯಕ್ಷ ಅನಿಲರಾವ್ ದೇಶಪಾಂಡೆ ಮೊದಲಾದವರಿದ್ದರು.

ಆರ್.ಎ.ಜೋಶಿ ಸ್ವಾಗತಿಸಿದರು. ಎಸ್.ಬಿ.ಇಂಗಳಿ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ ಅಥಣಿ ತಾಲೂಕು ಸಮಿತಿಯನ್ನು ರಚನೆ ಮಾಡಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ