Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ: ಪೊಲೀಸರ ಕೈಗೆ ಕೊನೆಗೂ ಸಿಕ್ಕಿಬಿದ್ದ ಟೈರ್ ಕಳ್ಳ

 

ಅಥಣಿ :
ಅಥಣಿ ಪಟ್ಟಣದ ಕಾಂಕ್ರೀಟ್ ಮಿಕ್ಸಿಂಗ್ ಘಟಕದಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ ವಾಹನದ 6 ಗಾಲಿಗಳನ್ನು (ಡಿಸ್ಕ್ ಸಮೇತ) ಕಳ್ಳತನ ಮಾಡಿ ಪರಾರಿಯಾಗಿದ್ದ, ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅನಂತಪುರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿ ಕುಮಾರ ದಶರಥ ಥೈಲರ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಒಂದು ತಿಂಗಳ ಹಿಂದೆ ಟಿಪ್ಪರ್‌ಗಳ ಟೈರ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಸುಮಾರು 2 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಡಿಸ್ಕ್ ಸಮೇತ 6 ಟೈರ್‌ಗಳನ್ನು ಮತ್ತು ಕಳ್ಳತನಕ್ಕೆ ಬಳಸಿದ ಮಹಾರಾಷ್ಟ್ರ ರಾಜ್ಯದ ನೋಂದಣಿ ಸಂಖ್ಯೆ ಹೊಂದಿರುವ ಸುಮಾರು 2 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ಪಡೆದುಕೊಂಡಿದ್ದಾರೆ.

ಅಥಣಿ ಡಿವೈಎಸ್ಪಿ ಶ್ರೀಪಾದ್ ಜಲ್ಲೆ, ಸಿಪಿಐ ರವೀಂದ್ರ
ನಾಯ್ಕಡಿ ಮಾರ್ಗದರ್ಶನದಲ್ಲಿ ಅಥಣಿ ಪಿಎಸ್‌ಐ ಶಿವಶಂಕರ ಮಕರಿ, ಅಪರಾಧ ವಿಭಾಗದ ಪಿಎಸ್‌ಐ ರಾಕೇಶ ಬಗಲಿ, ಎಎಸ್‌ಐ ವಿ.ಜಿ ಅರೇ‌, ಸಿಬ್ಬಂದಿಯಾದ ಬಿ ಜೆ. ತಳವಾರ, ಬಿ ವಿ.ನಾಯಕ, ಎ ಎ ಈರ್ಕರ, ಜೆ. ಎಚ್ ಡಾಂಗೆ, ಎಂ. ಎ. ಪಾಟೀಲ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಅಥಣಿ ಪೊಲೀಸರ ಈ ಕಾರ್ಯ ಸಾಧನೆಗೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ