Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ ಪಟ್ಟಣಕ್ಕೆ ಸಿಗಲಿದೆ 24 ×7 ಕುಡಿಯುವ ನೀರಿನ  ಭಾಗ್ಯ

ಜನ ಜೀವಾಳ ಜಾಲ; ಅಥಣಿ : ದಿನದ 24 ತಾಸು ನೀರಿನ ಸೌಲಭ್ಯ ಸಿಗಬೇಕು ಎನ್ನುವ ಅಥಣಿ ಪಟ್ಟಣದ ಜನರ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಅಥಣಿ ಕ್ಷೇತ್ರದ ಜನಮನದ ಜನಪ್ರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಯವರ ವಿಶೇಷ ಪ್ರಯತ್ನದಿಂದ ಈ ಯೋಜನೆಗೆ ರಾಜ್ಯ ಸರ್ಕಾರದಿಂದ ಸುಮಾರು 73.50 ಕೋಟಿ ರೂ. ಮಂಜೂರಾಗಿದೆ. ಇದು ಅಥಣಿ ಪಟ್ಟಣದ ಸಮಸ್ತ ನಾಗರಿಕರಲ್ಲಿ ಸಂತಸ ಮೂಡಿಸಿದೆ.

ಈ ಯೋಜನೆ ಅನುಷ್ಠಾನಕ್ಕೆ ಮುಂದಾಗಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಮ್ಮ ಅಥಣಿ ಕ್ಷೇತ್ರದ ಹೆಮ್ಮೆಯ ನಾಯಕ ಲಕ್ಷ್ಮಣ ಸವದಿಯವರಿಗೆ ಅಥಣಿ ಪಟ್ಟಣದ ಸಮಸ್ತ ಜನತೆ ಹಾಗೂ ಲಕ್ಷ್ಮಣ ಸವದಿಯವರ ಸಮಸ್ತ ಅಭಿಮಾನಿ ಬಳಗ ಇದೀಗ ಸಂತಸ ಸೂಚಿಸುತ್ತಿದೆ.

ಸವದಿಯವರ ಭಗೀರಥ ಪ್ರಯತ್ನ : ಎರಡು ದಶಕಗಳ ಹಿಂದಿನ ಮಾತು. ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಅಥಣಿ ಮತ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದರು. ಅಂದಿನಿಂದ ಇಡೀ ಅಥಣಿ ಮತಕ್ಷೇತ್ರದ ಒಟ್ಟಾರೆ ಚಿತ್ರಣವೇ ಬದಲಾಯಿತು. ಯಾಕೆಂದರೆ ತಮ್ಮ ಮತಕ್ಷೇತ್ರ ಅಭಿವೃದ್ಧಿ ಸಾಧಿಸಬೇಕು ಎಂಬ ಏಕೈಕ ಛಲದಿಂದ ಲಕ್ಷ್ಮಣ ಸವದಿ ಅವರು ಒಂದೊಂದೇ ಯೋಜನೆಗಳನ್ನು ತಮ್ಮ ಕ್ಷೇತ್ರಕ್ಕೆ ಸದ್ದಿಲ್ಲದೆ ತರಲು ಪ್ರಯತ್ನಿಸಿದರು. ಅವರ ಅವಿರತ ಪರಿಶ್ರಮದ ಫಲವಾಗಿ ಅಥಣಿ ಮತಕ್ಷೇತ್ರ ಇಂದು ಸಾಕಷ್ಟು ಅಭಿವೃದ್ದಿ ಪರ ಯೋಜನೆಗಳಿಂದ ನಳನಳಿಸುತ್ತಿದೆ.

ಮೂಲಭೂತ ಸೌಲಭ್ಯಗಳಿಂದ ತೀವ್ರ ನರಳಿ ಹೋದ ಅಥಣಿ ಮತಕ್ಷೇತ್ರ ಇದೀಗ ಸಮಗ್ರ ಅಭಿವೃದ್ಧಿ ಪರಿಕಲ್ಪನೆಯೊಂದಿಗೆ
ಮುನ್ನಡೆಯುತ್ತಿದೆ. ಲಕ್ಷ್ಮಣ ಸವದಿ ಅವರು ವಿಧಾನ ಸಭಾ ಸದಸ್ಯರಲ್ಲದೇ ಇರಬಹುದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ತಮ್ಮನ್ನು ಸೋಲಿಸಿದರೂ ಅದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸಮಗ್ರ ಅಥಣಿ ತಾಲ್ಲೂಕಿನ ಅಭಿವೃದ್ಧಿಯ ಸಂಕಲ್ಪದಿಂದ ರಾಜ್ಯ ಸರಕಾರದ ಮಟ್ಟದಲ್ಲಿ ಬಹಳ ಪ್ರಭಾವಶಾಲಿ ಯಾಗಿ ಕೆಲಸ ಮಾಡುತ್ತಿರುವುದು ಅಥಣಿ ತಾಲ್ಲೂಕಿನ ಮತದಾರರ ಸುದೈವ ಎಂದೇ ಹೇಳಬಹುದು.

ಇದೀಗ ಲಕ್ಷ್ಮಣ ಸವದಿ ಅವರು ಅಥಣಿ ಪಟ್ಟಣಕ್ಕೆ ದಿನದ 24 ಗಂಟೆಗಳ ಕಾಲ ನೀರು ಪೂರೈಸುವ ಮಹತ್ವದ ಸಂಕಲ್ಪ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿ ಕೊಡುವ ಮೂಲಕ ತಮ್ಮ ತವರಿಗೆ ವಿಶೇಷವಾದ ಕೊಡುಗೆಯನ್ನು ತಂದಿರುವುದು ಮಾನನೀಯ ಕಾರ್ಯವಾಗಿದೆ.

ಒಟ್ಟಾರೆ ಗಮನಿಸುವುದಾದರೆ ಅಥಣಿ ಮತಕ್ಷೇತ್ರದ ಜನರ ಬಹುದಿನಗಳ ಈ ಬೇಡಿಕೆಗೆ ಲಕ್ಷ್ಮಣ ಸವದಿ ಅವರು ಸ್ಪಂದಿಸಿ ರಾಜ್ಯ ಸರಕಾರದ ಮಟ್ಟದಲ್ಲಿ ಪ್ರಭಾವ ಬೀರಿ ಯೋಜನೆಯನ್ನು ಜಾರಿಗೊಳಿಸಿರುವುದು ಅತ್ಯಂತ ಸ್ತುತ್ಯಾರ್ಹ ಕಾರ್ಯವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ