Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯೋಧ್ಯೆ ರಾಮನಿಗೆ ಚೊಚ್ಚಲ ಸಂಭ್ರಮ

ಅಯೋಧ್ಯೆ : ಅಯೋಧ್ಯೆ ಹೆಸರು ಕೇಳಿದಾಗ ಮೊದಲು ನೆನಪಾಗುವುದು ರಘುಕುಲ ತಿಲಕ, ದಶರಥ ನಂದನ, ಮರ್ಯಾದಾ ಪುರುಷೋತ್ತಮ ಪ್ರಭು ರಾಮಚಂದ್ರನ ಜನ್ಮಸ್ಥಳ. ಕಳೆದ ಒಂದು ವರ್ಷದಿಂದ ಅಯೋಧ್ಯೆ ದೇಶದ ಗಮನ ಸೆಳೆಯುತ್ತಿದೆ. ಸಾಂಸ್ಕೃತಿಕ, ಆಧ್ಯಾತ್ಮಿಕತೆಯ ರಾಜಧಾನಿಯಂತಿರುವ ಉತ್ತರ ಪ್ರದೇಶದಲ್ಲಿ ಇದೀಗ ಅಯೋಧ್ಯೆಯೇ ದೇಶದ ಗಮನ ಸೆಳೆಯುತ್ತಿರುವುದು. ಅದಕ್ಕೆಲ್ಲ ಕಾರಣ ರಾಮಲಲ್ಲಾನ ಭವ್ಯ ಮಂದಿರ. ಭವ್ಯ ಮಂದಿರ ಆರಂಭವಾಗಿ ಇದೀಗ ಒಂದು ವರ್ಷ ತುಂಬಿದ್ದು ಅಲ್ಲಿ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂಬುದರ ಕುರಿತು ಒಂದು ನೋಟ ಇಲ್ಲಿದೆ.

ವರ್ಷ ತುಂಬಿದ ಖುಷಿಯಲ್ಲಿ ಅದ್ಧೂರಿ ಕಾರ್ಯಕ್ರಮ:

2023 ಜ.22ರಂದು ಭವ್ಯವಾದ ಮಂದಿರ ಉದ್ಘಾಟನೆಯಾಗಿತ್ತು. ಆದರೆ ಹಿಂದೂ ಪಂಚಾಂಗದ ಪ್ರಕಾರ ಈ ಸಂಭ್ರಮಕ್ಕೆ ಜ.11ರಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ (ಪ್ರತಿಷ್ಠಾ ದ್ವಾದಶಿ) ಹಮ್ಮಿಕೊಳ್ಳಳಲಾಗಿದೆ. ಮೊದಲ ದಿನ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬಾಲ ರಾಮನಿಗೆ ಅಭಿಷೇಕ ನೆರವೇರಿಸಲಿದ್ದಾರೆ. ಮಂದಿರದ ಸಮೀಪವಿರುವ ಅಂಗದ ಟೀಲಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜತೆಗೆ, ಖ್ಯಾತ ಗಾಯಕರ ಭಕ್ತಿ ಗೀತೆಗಳೂ ಬಿಡುಗಡೆಗೊಳ್ಳಲಿವೆ. ದೇಶಾದ್ಯಂತವಿರುವ ಸಂತರು ಹಾಗೂ ಭಕ್ತರಿಗೆ ಟ್ರಸ್ಟ್‌ ಆಮಂತ್ರಣ ಕಳಿಸಿದೆ.

ಉದ್ಘಾಟನೆಗೊಂಡ ವರ್ಷದೊಳಗೇ ಅಯೋಧ್ಯೆ ರಾಮಮಂದಿರ ದೇಶದ ನಂ.1 ಪ್ರವಾಸಿ ತಾಣ ಅಥವಾ ಭಕ್ತಾದಿಗಳ ನೆಚ್ಚಿನ ಭೇಟಿಯ ತಾಣವಾಗಿ ಹೊರಹೊಮ್ಮಿದೆ. 2024ರ ಜನವರಿ ಮತ್ತು ಸೆಪ್ಟೆಂಬರ್ ಅವಧಿಯಲ್ಲಿ ಉತ್ತರ ಪ್ರದೇಶಕ್ಕೆ ಸುಮಾರು 47 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು. ಈ ಪೈಕಿ ಅಯೋಧ್ಯೆ ಒಂದಕ್ಕೇ 13.3 ಕೋಟಿ ಪ್ರವಾಸಿಗರು ಭೇಟಿ ಕೊಟ್ಟಿದ್ದಾರೆ. ಅದರಲ್ಲಿ 3,153 ವಿದೇಶಿಗರೂ ಸೇರಿದ್ದಾರೆ. ಮಂದಿರದಿಂದ ರಾಜ್ಯದ ಪ್ರವಾಸೋದ್ಯಮದ ನಕಾಶೆಯನ್ನೇ ಬದಲಿಸಿದೆ. ಹಬ್ಬಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ದೀಪಾವಳಿ ಸಂದರ್ಭದಲ್ಲಿ ಸರಯೂ ನದಿಯ ದಂಡೆಯ ಮೇಲೆ 22 ಲಕ್ಷ ಹಣತೆಗಳನ್ನು ಸರ್ಕಾರ ಬೆಳಗಿಸುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಿಸಿತು. ರಾಮಮಂದಿರ ಸುರಕ್ಷತೆ ನಿರ್ವಹಣೆಗೆ ವಿಶ್ವದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪ್ರತಿಷ್ಠಿತ ‘ಸ್ವರ್ಡ್ ಆಫ್ ಆನರ್’ ಪ್ರಶಸ್ತಿಯನ್ನು ರಾಮಮಂದಿರ ಪಡೆದುಕೊಂಡಿದೆ.

ಹಾಲಿ ಉದ್ಘಾಟನೆಗೊಂಡಿರುವ ರಾಮಮಂದಿರ ಇನ್ನೂ ಪೂರ್ಣ ಪ್ರಮಾಣವಾಗಿದ್ದಲ್ಲ. ರಾಮಮಂದಿರ ಸಂಕೀರ್ಣದ ಒಟ್ಟು ವಿಸ್ತಾರ 72 ಎಕರೆ. ಈ ಪೈಕಿ ಮೊದಲಿಗೆ ನಿರ್ಮಾಣವಾಗಿದ್ದು ಅಂದಾಜು 3 ಎಕರೆ ಪ್ರದೇಶದಲ್ಲಿನ ರಾಮಮಂದಿರ ಮಾತ್ರ. ಇದನ್ನು 1800 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಲಾಗಿದೆ. ದೇಗುಲ 250 ಅಡಿ ಅಗಲ ಹಾಗೂ 161 ಅಡಿ ಎತ್ತರವಿದೆ. ಅಯೋಧ್ಯೆ ರಾಮ ಮಂದಿರದ ಮುಖ್ಯ ಆಲಯವೇ 2.67 ಎಕರೆ ಪ್ರದೇಶದಷ್ಟಿದೆ. ಭಕ್ತರು 32 ಮೆಟ್ಟಿಲುಗಳನ್ನು ಹತ್ತಿ ದೇಗುಲ ಪ್ರವೇಶ ಮಾಡಬೇಕಿದೆ. ನೆಲ ಮಟ್ಟದಿಂದ ಸಿಂಹ ದ್ವಾರವು 16.11 ಅಡಿ ಎತ್ತರದಲ್ಲಿದೆ. ಅಯೋಧ್ಯೆ ನಾಗರಶೈಲಿಯಲ್ಲಿ ನಿರ್ಮಾಣವಾಗಿರುವ ದೇವಾಲಯ. 5 ಮಂಟಪಗಳ ರಚನೆಯನ್ನು ಹೊಂದಿದ್ದು, ಗರ್ಭಗುಡಿಯ ಮೇಲೆ ಬೃಹತ್‌ಗೋಪುರವನ್ನು ನಿರ್ಮಿಸಲಾಗಿದೆ. 3 ಅಂತಸ್ತಿನಲ್ಲಿ ಭವ್ಯವಾಗಿ ತಲೆ ಎತ್ತಿದೆ. ದೇವಾಲಯದಲ್ಲಿ ಗರ್ಭಗುಡಿ, ಜಗುಲಿ ಅಥವಾ ಮಂಟಪ, ಶಿಖರ ಹಾಗೂ ಗರ್ಭಗುಡಿಯ ನೇರಕ್ಕೆ ದೇಗುಲದ ಎದುರಿನಲ್ಲಿ ದೇವರ ವಾಹನವಿದೆ.

ಇಡೀ ಸಂಕೀರ್ಣವನ್ನು ಹಲವು ಹಂತಗಳಲ್ಲಿ ಪೂರ್ಣಗೊಳ್ಳಲಿದೆ. ಶ್ರೀರಾಮ ಕುಂಡ ಯಜ್ಞಶಾಲೆ, ಪೂಜಾ ಕೈಂಕರ‍್ಯಕ್ಕೆ ಕರ್ಮ ಕ್ಷೇತ್ರ, ರಾಮಾಂಗಣ ಚಿತ್ರಮಂದಿರ, ಬೃಹತ್‌ ಹನುಮ ಪ್ರತಿಮೆ, ವಸ್ತು ಸಂಗ್ರಹಾಲಯ, ರಾಮಾಯಣ ಗ್ರಂಥಾಲಯ, ಸಪ್ತಋುಷಿಗಳ 7 ದೇವಾಲಯ, ಸೀತೆ, ವಾಲ್ಮೀಕಿ ಸೇರಿ ಅನೇಕ ದೇವಸ್ಥಾನ , ಶ್ರೀರಾಮನ ಪತ್ನಿ, ಸೀತಾ ಮಾತೆಗಾಗಿ ರಾಮ ಪುಷ್ಕರಣಿ, ಸಭಾಂಗಣ ಮತ್ತು ಕಲ್ಯಾಣ ಮಂಟಪ,ಪಶುವೈದ್ಯಕೀಯ ಸೌಲಭ್ಯ, ಲವಕುಶ ಮೈದಾನ, ಲಕ್ಷ್ಮಣ ವಾಟಿಕಾ ಕಾರಂಜಿ ಸೇರಿದಂತೆ ಇನ್ನು ಹಲವು ಯೋಜನೆಗಳ ಕಾಯಕಲ್ಪ ಪ್ರಗತಿಯಲ್ಲಿದೆ. ಅದೆಲ್ಲವೂ ಪೂರ್ಣಗೊಂಡು ವರ್ಷದ ಅಂತ್ಯಕ್ಕೆ ಹೊಸ ರೂಪ ಸಿಗಲಿದೆ.

ರಾಮಮಂದಿರ ಉದ್ಘಾಟನೆ ಬಳಿಕ ಕೇವಲ ಮಂದಿರದ ಚಿತ್ರಣ ಮಾತ್ರ ಬದಲಾಗಿಲ್ಲ. ಬದಲಾಗಿ ಸುತ್ತ ಮುತ್ತಲಿನ ಊರಿಗೂ ಹೊಸ ಕಳೆ ಬಂದಿದೆ. ಇಡೀ ಅಯೋಧ್ಯೆ ನಗರಿಗೆ ಹೊಸ ರೂಪವನ್ನು ನೀಡಲಾಗಿದೆ. ಸರಯೂ ನದಿಯಿಂದ ರಾಮ ಮಂದಿರ ಸಂಪರ್ಕಿಸಲು 13 ಕಿ.ಮೀನಷ್ಟು ಉದ್ದ ರಾಮಪಥ ನಿರ್ಮಾಣವಾಗಿದೆ. ಹೊಸ ರೂಪ ನೀಡಲಾಗಿದೆ. ಇದಕ್ಕಾಗಿ 50 ಸಾವಿರ ಕೋಟಿ ರು. ವೆಚ್ಚ ಮಾಡಲಾಗಿತ್ತು. ಅಯೋಧ್ಯೆಯಲ್ಲಿ ಸುಸಜ್ಜಿತ ರೈಲು ನಿಲ್ದಾಣ, ಅತ್ಯಾಧುನಿಕ ವಿಮಾನ ನಿಲ್ದಾಣ, ಅಗಲವಾದ ರಸ್ತೆಗಳನ್ನು ನಿರ್ಮಿಸಲಾಗಿದೆ. ಒಟ್ಟಿನಲ್ಲಿ ಅಯೋಧ್ಯೆಯೇ ಹೊಸತನದಿಂದ ಕಂಗೊಳಿಸುತ್ತಿದೆ.

ಅಯೋಧ್ಯೆ ರಾಮಮಂದಿರದ ಮುಖ್ಯ ವಿಗ್ರಹವನ್ನು ಕೆತ್ತಿದ್ದು ಮೈಸೂರಿನ ಅರುಣ್‌ ಯೋಗಿರಾಜ್‌. ವಿಗ್ರಹ ಕೆತ್ತುವಿಕೆಗೆ ಮೂರು ಜನರನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ಕನ್ನಡಿಗರಾದ ಅರುಣ್‌ ಯೋಗಿರಾಜ್‌, ಉತ್ತರ ಕನ್ನಡದ ಹೊನ್ನಾವರದ ಇಡಗುಂಜಿಯ ಗಣೇಶ್‌ ಭಟ್‌ ಮತ್ತು ರಾಜಸ್ಥಾನದ ಇನ್ನೊಬ್ಬ ಶಿಲ್ಪಿ. ಈ ಪೈಕಿ ಅಂತಿಮವಾಗಿ ಅರುಣ್‌ ಕೆತ್ತಿದ ವಿಗ್ರಹ ಆಯ್ಕೆಯಾಗಿತ್ತು. ಇದು, 51 ಇಂಚುಗಳ ಎತ್ತರವನ್ನು ಹೊಂದಿದೆ. ಭಗವಾನ್ ಶ್ರೀರಾಮನು ಬಿಲ್ಲು ಮತ್ತು ಬಾಣವನ್ನು ಹಿಡಿದಿರುವ 5 ವರ್ಷದ ಮಗುವಿನ ರೂಪದಲ್ಲಿದೆ.

500 ವರ್ಷಗಳ ಕಾಯುವಿಕೆ ಅಂತ್ಯ:
ರಾಮಜನ್ಮಭೂಮಿ ಹೋರಾಟದ ಇತಿಹಾಸ ಆರಂಭವಾಗುವುದೇ ಮೊಘಲ್‌ ದೊರೆ ಬಾಬರ್‌ ಕಾಲದಲ್ಲಿ. 1528 ರಲ್ಲಿ ಮಂದಿರ ಧ್ವಂಸಗೊಳಿಸಿ ಬಾಬರಿ ಮಸೀದಿ ನಿರ್ಮಿಸಿದ. 1858ರಲ್ಲಿ ನಿರ್ಮೋಹಿ ಅಖಾಡದ ರಘುಬರ್‌ ದಾಸ್‌ ಮೊದಲ ಬಾರಿಗೆ ಕೋರ್ಟ್‌ ಮೆಟ್ಟಿಲೇರಿದರು. ಈ ಕುರಿತು ಸುದೀರ್ಘ ವಿಚಾರಣೆ ನಡೆದು ವಿವಾದಿತ ಬಾಬ್ರಿ ಮಸೀದಿ ಸ್ಥಳ ರಾಮಲಲ್ಲಾಗೆ ಸೇರಿದ ಜಾಗ ಎಂದು 2019ರ ನ.9ರಂದು ಅಂದಿನ ಸಿಜೆಐ ರಂಜನ್‌ ಗೊಗೋಯ್‌ ನೇತೃತ್ವದ ಪೀಠ ಚಾರಿತ್ರಿಕ ತೀರ್ಪು ನೀಡಿತ್ತು. ಬಳಿಕ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ 2020ರ ಆಗಸ್ಟ್‌ 5ರಂದು ಶಿಲಾನ್ಯಾಸ ನೆರವೇರಿಸಿದ್ದರು. ಮೂರೂವರೆ ವರ್ಷಗಳ ಕಾಲ ಕಾಮಗಾರಿ ಸಾಗಿ, ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆ ನೆರವೇರಿತ್ತು. ಸುಮಾರು 1,800 ಕೋಟಿ ರು.ವೆಚ್ಚದಲ್ಲಿ ಮಂದಿರ ತಲೆ ಎತ್ತಿ ನಿಂತಿತು.

ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?

• ಜ.11ರ ಮೊದಲ ದಿನ ಪ್ರತಿಷ್ಟಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
• 'ಪಂಚಾಮೃತ' ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆ.10 ಗಂಟೆಗೆ ಶುರು • ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಿಂದ ರಾಮಲಲ್ಲಾಗೆ ಅಭಿಷೇಕ ಮಾಡಲಿದ್ದಾರೆ.
• ಪ್ರಾಥಮಿಕ ಆರತಿಯನ್ನು ಮಧ್ಯಾಹ್ನ 12.20ಕ್ಕೆ ಆಯೋನೆ
• ರಾಮಲಲ್ಲಾವನ್ನು ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟವಾದ ಪೀತಾಂಬರಿಯಿಂದ ಅಲಂಕಾರ
• ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
• 110 ಗಣ್ಯರು, ಜನಸಾಮಾನ್ಯರು ಸೇರಿ 5000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ