Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೇಮರಡ್ಡಿ ಮಲ್ಲಮ್ಮ ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ರಂಗಭೂಮಿಗೆ ಸಾವಿಲ್ಲ ಎಂಬುದು ಸಾಬೀತು ಎಂದ ಬಸವರಾಜ ಜಗಜಂಪಿ

Advertisement
ಬೆಳಗಾವಿ: ರಂಗಸೃಷ್ಟಿ ತಂಡದವರಿಂದ ಬೆಳಗಾವಿಯಲ್ಲಿ ನಡೆದ ಇಳೆಯ ಬೆಳಕು (ಸಾಧ್ವಿ ಹೇಮರಡ್ಡಿ ಮಲ್ಲಮ್ಮ) ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರನ್ನು ನೋಡಿದರೆ ರಂಗಭೂಮಿಗೆ ಸಾವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಹಿರಿಯ ವಿಧ್ವಾಂಸ, ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಜಗಜಂಪಿ ಹೇಳಿದ್ದಾರೆ.

ಶನಿವಾರ ಕನ್ನಡಭವನದಲ್ಲಿ ನಡೆದ ನಾಟಕದ ಮಧ್ಯೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಭಾಂಗಣ ಪ್ರೇಕ್ಷಕರಿಂದ ತುಂಬಿ ಹೋಗಿದ್ದಲ್ಲದೆ, ಒಳಗಿರುವವರಿಗಿಂತ ಹೆಚ್ಚು ಜನರು ಕುಳಿತುಕೊಳ್ಳಲು ಅವಕಾಶ ಸಿಗದೆ ಮರಳಿ ಹೋಗುವಂತಾಗಿದೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ನಾಟಕ ನೋಡಲು ಬರುತ್ತಾರೆಂದರೆ ರಂಗಭೂಮಿ ಇನ್ನೂ ತನ್ನ ಆಕರ್ಷಣೆ ಕಳೆದುಕೊಂಡಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದರು.
ರಂಗಸೃಷ್ಟಿ ತಂಡದ ಕಲಾವಿದರು ಈ ಹಿಂದೆ ಅಭಿನಯಿಸಿದ ನಾಟಕಗಳಿಗೂ ಅಪಾರ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದರು. ಕಲಾವಿದರು ಬಹಳ ಶ್ರಮಪಟ್ಟು ನಾಟಕ ಕಲಿತು ಅಭಿನಯಿಸಿದ್ದಾರೆ. ಈ ರೀತಿ ಮನಃಪೂರ್ವಕವಾಗಿ ತೊಡಗಿಸಿಕೊಂಡಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಅವರು ಹೇಳಿದರು.
ನೀರಾವರಿ ಇಲಾಖೆಯ ಪ್ರಧಾನ ಅಭಿಯಂತರ ಅಶೋಕ ವಾಸನದ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ರಂಗಸೃಷ್ಟಿ ತಂಡದ ಕಲಾವಿದರು ಪ್ರದರ್ಶಿಸಿದ ನಾಟಕ ಪ್ರೇಕ್ಷಕರಿಂದ ಭಾರೀ ಪ್ರಶಂಸೆ ಪಡೆಯಿತು. ಡಾ.ರಾಮಕೃಷ್ಣ ಮರಾಠೆ ರಚಿಸಿದ ನಾಟಕವನ್ನು ಶಿರೀಶ್ ಜೋಶಿ ನಿರ್ದೇಶಿಸಿದ್ದರು. ಲಿಂಗಾಯತ ಮಹಿಳಾ ಸಮಾಜ, ನಾವು ನಮ್ಮವರೊಂದಿಗೆ ಹಾಗೂ ಕನ್ನಡ ಭವನ ಸಹಯೋಗ ಒದಗಿಸಿತ್ತು. ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್, ಉಪಾಧ್ಯಕ್ಷ ಎಂ.ಕೆ.ಹೆಗಡೆ, ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಮಧುಮತಿ ಹಿರೇಮಠ, ನಾವು ನಮ್ಮವರೊಂದಿಗೆ ಸಂಘಟನೆಯ ಸರ್ವಮಂಗಳ ಅರಳಿಮಟ್ಟಿ, ಕನ್ನಡ ಭವನದ ಯ.ರು.ಪಾಟೀಲ ಮೊದಲಾದವರು ಇದ್ದರು.
ಶಾರದಾ ಭೋಜ, ಶರಣಯ್ಯ ಮಠಪತಿ, ವಿಶ್ವನಾಥ ದೇಸಾಯಿ, ಶರಣಗೌಡ ಪಾಟೀಲ, ಶಾಂತಾ ಆಚಾರ್ಯ, ಶ್ರದ್ಧಾ ಪಾಟೀಲ, ಜಯಶ್ರೀ ಕ್ಷೀರಸಾಗರ, ರಮೇಶ ಜಂಗಲ್, ಎ.ಎಂ.ಜಯಶ್ರೀ, ಶಾಂತಾ ಜಂಗಲ್, ಶೋಭಾ ಬನಶಂಕರಿ, ಪಿ.ಜಿ.ಕೆಂಪಣ್ಣವರ್, ಶೈಲಜಾ ಭಿಂಗೆ, ಲತಾ ಅರಕೇರಿ, ಜಯಶೀಲಾ ಬ್ಯಾಕೋಡ, ಪುಷ್ಪಾ ಮರಡೂರ, ಜ್ಯೋತಿ ಬದಾಮಿ, ಗಂಗಾ ತಿಮ್ಮನಾಯ್ಕರ್, ರಮೇಶ ಮಿರ್ಜಿ, ಸುರೇಖಾ ದೇಸಾಯಿ, ಸುಕಲ್ಪ ಮಠಪತಿ, ಶೋಭಾ ನ್ಯಾಮಗೌಡರ್, ಜ್ಯೋತಿ ಸೊನ್ನದ ಪಾತ್ರ ನಿರ್ವಹಿಸಿದರು.

ಮಂಜುಳಾ ಜೋಶಿ ಹಿನ್ನೆಲೆ ಗಾಯನ, ನಾರಾಯಣ ಗಣಾಚಾರಿ ತಬಲಾ, ರಮೇಶ ಮಿರ್ಜಿ ಸಂಗೀತ ನಿರ್ವಹಣೆ, ಗುರು ಪೆಡ್ನೇಕರ್ ಬೆಳಕಿನ ವಿನ್ಯಾಸ, ಶರಣಗೌಡ ಪಾಟೀಲ ರಂಗ ಸಜ್ಜಿಕೆ, ಶಾಂತಾ ಆಚಾರ್ಯ ನೃತ್ಯ ಸಂಯೋಜನೆ, ರಾಜಕುಮಾರ ಕುಂಬಾರ ರಂಗ ನಿರ್ವಹಣೆ ಮಾಡಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ