Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ರಣಕಣಕ್ಕೆ ಧುಮುಕಿದ ಬಸವರಾಜ !

 

 

 

ಬೆಳಗಾವಿ :
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧೆ ನಡೆಸುತ್ತಾರೆ ಎಂಬ ಊಹಾಪೋಹಾ ಹರಡಿತ್ತು. ಅದೀಗ ನಿಜವಾಗಿದೆ. ಅಥಣಿ ಮತಕ್ಷೇತ್ರದಲ್ಲಿ ಈ ಬಾರಿ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಖಾಕಿಗೆ ಬಾಯ್ ಹೇಳಿ ಖಾದಿಗೆ ಜೈ ಹೇಳಿದ್ದಾರೆ ಡಾಕ್ಟರ್ ಬಸವರಾಜ ಬೀಸನಕೊಪ್ಪ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದವರು. ಇವರ ತಂದೆ ಭೀಮಪ್ಪ. ತಾಯಿ ಸರೋಜನಿ. ಇವರ ತಂದೆ-ತಾಯಿಗೆ ಮೊದಲನೇ ಮಗನಾಗಿದ್ದು ಇವರಿಗೆ ಇಬ್ಬರು ಸಹೋದರಿಯರು ಕೂಡಾ ಇದ್ದಾರೆ. ಇವರು ಒಂದು ಸಾಮಾನ್ಯ ಬಡ ಕುಟುಂಬದಿಂದ ಬಂದವರಾಗಿದ್ದಾರೆ. ಇವರಿಗೆ ಜನರ ಸೇವೆ ಮಾಡುವುದರಲ್ಲಿ ಹೆಚ್ಚಿನ ಆಸಕ್ತಿ ಇರುವುದರಿಂದ ಇವರ ಖಾಕಿಗೆ ಬಾಯ್ ಹೇಳಿದ್ದಾರೆ.

ಇವರು ವಿಜಯಪುರನಲ್ಲಿನ ಠಾಣೆಯೊಂದರಲ್ಲಿ ಸಿಪಿಐ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಆದರೆ ಜನಸೇವೆಯಲ್ಲಿ ತೊಡಗಲು ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ ನಂತರ ಅವರು ತಮ್ಮ ಮೆಚ್ಚಿನ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಆ ರಾಜಕೀಯ ಪಕ್ಷದ ಜೊತೆ ಈಗಾಗಲೇ ಸಂಪರ್ಕ ಸಾಧಿಸಿರುವ ಇವರು ಬಹುತೇಕ ಆ ರಾಜಕೀಯ ಪಕ್ಷದಿಂದ ಸ್ಪರ್ಧೆ ನಡೆಸುವುದು ಬಹುತೇಕ ಖಚಿತ.
ಇವರ ಸ್ಪರ್ಧೆ ಇದೀಗ ಅಥಣಿ ಮತಕ್ಷೇತ್ರದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ